ಸಂಗ್ರಹ ಚಿತ್ರ 
ರಾಜ್ಯ

ರೂ.10 ಕೋಟಿ ವರೆಗೂ ಆರ್ಥಿಕ ಇಲಾಖೆ ಅನುಮತಿ ಅಗತ್ಯವಿಲ್ಲ, 2020-21 ಕೊನೆ ತ್ರೈಮಾಸಿಕ ಅನುದಾನ ಬಿಡುಗಡೆಗೆ ಸೂಚನೆ

2020-21 ನೇ ಸಾಲಿನ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆ ಮಾಡಲು ವಿವಿಧ ಇಲಾಖೆಗಳಿಗೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು: 2020-21 ನೇ ಸಾಲಿನ ಕೊನೆಯ ಕಂತಿನ ಅನುದಾನವನ್ನು ಬಿಡುಗಡೆ ಮಾಡಲು ವಿವಿಧ ಇಲಾಖೆಗಳಿಗೆ ಆರ್ಥಿಕ ಇಲಾಖೆ ಸೂಚನೆ ನೀಡಿದೆ.

ಈ ಕುರಿತು ಆರ್ಥಿಕ ಇಲಾಖೆ ಕಾರ್ಯದರ್ಶಿ ಏಕರೂಪ ಕೌರ್ ವಿವಿಧ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಟಿಪ್ಪಣಿ ಬರೆದಿದ್ದು, ಯಾವುದೇ ಇಲಾಖೆ 2020-21 ನೇ ಸಾಲಿನಲ್ಲಿ ನವೆಂಬರ್ ನಿಂದ ಫೆಬ್ರವರಿವರೆಗೂ ವೇತನ, ಭತ್ಯೆ, ಪಿಂಚಣಿ ಸೇರಿದಂತೆ ಅನುದಾನ ಬಿಡುಗಡೆ ಮಾಡಲು ಇಲಾಖಾ ಮುಖ್ಯಸ್ಥರಿಗೆ ಅಧಿಕಾರ ನೀಡಿ ಆದೇಶಿಸಿದ್ದಾರೆ.

ವಿವಿಧ ಇಲಾಖೆಗಳ ಮುಖ್ಯಸ್ಥರು ತಮ್ಮ ವ್ಯಾಪ್ತಿಯಲ್ಲಿ 10 ಕೋಟಿ ರೂ ವರೆಗಿನ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯ ಅನುಮೋದನೆ ಪಡೆಯುವ ಅಗತ್ಯವಿಲ್ಲ ಎಂದು ತಿಳಿಸಿದ್ದು, ಆದರೆ, ಹಣ ಖರ್ಚು ಮಾಡಿರುವ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ನೀಡುವಂತೆ ಸೂಚಿಸಲಾಗಿದೆ.

ಕೋರೊನಾ ಪರಿಣಾಮದಿಂದ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಈಗಾಗಲೇ ಹಣ ಬಿಡುಗಡೆಯ ಕುರಿತು ಇಲಾಖೆಗಳಿಗೆ ನೀಡಿರುವ ಸೂಚನೆ ಮುಂದುವರೆಯಲಿದ್ದು, 10 ಕೋಟಿವರೆಗಿನ ಹಾಲಿ ಚಾಲ್ತಿಯಲ್ಲಿರುವ ಹಾಗೂ ಈಗಾಗಲೇ ಚಾಲನೆಯಲ್ಲಿರುವ ಯೋಜನೆಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡಬೇಕು. ಯಾವುದೇ ಹೊಸ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತಿಲ್ಲ. ಹಾಗೆ ಮಾಡಬೇಕೆಂದರೆ ಆರ್ಥಿಕ ಇಲಾಖೆಯ ಒಪ್ಪಿಗೆ ಪಡೆಯುವುದು ಕಡ್ಡಾಯ ಎಂದು ಸೂಚಿಸಲಾಗಿದೆ.

ಯಾವುದೇ ಇಲಾಖೆ 10 ಕೋಟಿಗಿಂತ ಹೆಚ್ಚಿನ ಮೊತ್ತದ ಯೋಜನೆಗೆ ಅನುದಾನ ಬಿಡುಗಡೆ ಮಾಡುವ ಮೊದಲು ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ. ಅಲ್ಲದೇ ಈಗಾಗಲೇ ಏಪ್ರಿಲ್‍ನಿಂದ ಅಕ್ಟೋಬರ್‍ವರೆಗೆ ಬಿಡುಗಡೆ ಮಾಡಿರುವ ಹಣದಲ್ಲಿ ಶೇಕಡಾ 75 ರಷ್ಟು ಖರ್ಚು ಮಾಡಿರುವುದನ್ನು ಖಾತ್ರಿ ಮಾಡಿಕೊಂಡು ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು. ಈ ಬಗ್ಗೆ ಆರ್ಥಿಕ ಇಲಾಖೆಗೆ ವರದಿ ಸಲ್ಲಿಸುವಂತೆ ಇಲಾಖೆಗಳ ಮುಖ್ಯಸ್ಥರಿಗೆ ತಿಳಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!

ರಷ್ಯನ್ ತೈಲ: ಆರ್ಥಿಕ ಅವಶ್ಯಕತೆ ಮತ್ತು ಅಮೆರಿಕದ ಒತ್ತಡಗಳ ನಡುವೆ ಸಿಲುಕಿದ ಭಾರತ, ಚೀನಾ (ಜಾಗತಿಕ ಜಗಲಿ)

ನಾವು ಭಾರತೀಯರನ್ನು ನಂಬುತ್ತೇವೆ; ಟ್ರಂಪ್ ನಮಗೆ...: ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಾ ಕೊರಿನಾ ಮಚಾದೊ ಅಚ್ಚರಿ ಹೇಳಿಕೆ

ಗದರಿಸಿದ್ದಕ್ಕೆ ತಾಯಿಯನ್ನು ಕೊಡಲಿಯಿಂದ ಹೊಡೆದು ಕೊಂದ 16 ವರ್ಷದ ಬಾಲಕ!

Pratap Simha vs Pradeep Eshwar: 'ಲೇ ಮಗನೆ.. ನಮ್ಮಪ್ಪನ್ನಂತೂ ನಿಮ್ಮೂರಿಗೆ ಕಳಿಸಲ್ಲ': ಮಿತಿ ಮೀರಿದ ವಾಕ್ಸಮರ, Video

SCROLL FOR NEXT