ಬಿಸಿ ಪಾಟೀಲ್ 
ರಾಜ್ಯ

ಕೃಷಿ ವಿವಿಗಳು ಗ್ರಾಮಗಳನ್ನು ದತ್ತು ಪಡೆಯಬೇಕು: ಬಿ.ಸಿ. ಪಾಟೀಲ್

ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನಾಂದಿಹಾಡಬೇಕು. ಇದು ಅತ್ಯಂತ ಜರೂರಿನ ಕೆಲಸ ಎಂದು ಕೃಷಿ ಸಚಿವರೂ ಆಗಿರುವ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.

ಬೆಂಗಳೂರು: ರಾಜ್ಯದ ಕೃಷಿವಿಶ್ವಿದ್ಯಾಲಯಗಳು ಗ್ರಾಮಗಳನ್ನು ದತ್ತು ಪಡೆಯಬೇಕು. ಈ ಮೂಲಕ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ನಾಂದಿಹಾಡಬೇಕು. ಇದು ಅತ್ಯಂತ ಜರೂರಿನ ಕೆಲಸ ಎಂದು ಕೃಷಿ ಸಚಿವರೂ ಆಗಿರುವ ಕೃಷಿವಿಶ್ವದ್ಯಾಲಯಗಳ ಸಹ ಕುಲಾಧಿಪತಿ ಬಿ.ಸಿ. ಪಾಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ 54ನೇ ಘಟಿಕೋತ್ವವದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿ.ಎಚ್.ಡಿ. ಪಡೆದವರಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಒಟ್ಟು ಆರು ಕೃಷಿ ವಿಶ್ವವಿದ್ಯಾಲಯಗಳಿವೆ. ಇವುಗಳು ಪ್ರತಿವರ್ಷ ತಲಾ ನಾಲ್ಕು ಹಳ್ಳಿಗಳನ್ನು ದತ್ತು ಪಡೆದುಕೊಂಡು ಅಲ್ಲಿನ ಕೃಷಿಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ಮಾದರಿ ಗ್ರಾಮಗಳನ್ನಾಗಿ ಮಾಡಬೇಕು ಎಂದು ಸಲಹೆ ಮಾಡಿದರು.

ಕಳೆದ ಇಪ್ಪತ್ತು ವರ್ಷಗಳಿಂದ ರಾಜ್ಯದ ಕೃಷಿ ಇಲಾಖೆಯ ವೃಂದ – ನೇಮಕಾತಿ ನಿಯಮಾವಳಿಗಳಿಗೆ ತಿದ್ದುಪಡಿಯಾಗಿರಲಿಲ್ಲ. ನಾನು ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದರ ಬಗ್ಗೆ ಆಸಕ್ತಿ ವಹಿಸಿದೆ. ಅದು ಇತ್ತೀಚೆಗೆ ತಿದ್ದುಪಡಿಯಾಗಿದೆ ಎಂದರು.

ಇನ್ನು ಆಹಾರ ಮತ್ತು ಕೃಷಿ ಇಂಜಿನಿಯರಿಂಗ್ ವಿಷಯಗಳಲ್ಲಿ ಪದವಿ ಪಡೆದವರಿಗೆ ಶೇಕಡ 15ರಷ್ಟು ಹುದ್ದೆಗಳನ್ನು ಮೀಸಲಿಡಲಾಗಿದೆ ಎಂದು ಬಿಸಿ ಪಾಟೀಲ್ ಅವರು ವಿವರಿಸಿದರು.

ಪದವಿ, ಅತೀಹೆಚ್ಚು ಚಿನ್ನದ ಪದಕಗಳನ್ನು ಪಡೆದವರಲ್ಲಿ ವಿದ್ಯಾರ್ಥಿನಿಯರೇ ಅಧಿಕವಾಗಿದ್ದಾರೆ. ಇದು ಸಂತೋಷದ ಸಂಗತಿ. ಆದರೆ ಉದ್ಯಮಿಗಳಾದವರು, ಸರ್ಕಾರಿ  ಉದ್ಯೋಗಿಗಳಾದವರ ಸಂಖ್ಯೆ ಗಮನಿಸಿದರೆ ಮಹಿಳೆಯರು ಕಡಿಮೆ ಇದ್ದಾರೆ. ಕೃಷಿ ಪದವಿ, ಸ್ನಾತಕೋತ್ತರ ಪದವಿ ಪಡೆದವರು ಕೃಷಿ ನವೋದ್ಯಮಿಗಳಾಗಿ  ಹೊರಹೊಮ್ಮಬೇಕು. ಈ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಈ ಮಾದರಿಯಲ್ಲಿ ಇಂಥ ವಿದ್ಯಾರ್ಥಿನಿಯರ ಜೀವನಪಥ ಮುಂದುವರಿಯಲು ಕೃಷಿ ವಿಶ್ವವಿದ್ಯಾಲಯ ಆಸಕ್ತಿ ವಹಿಸಬೇಕು ಎಂದು ಸೂಚಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT