ವಾಟಾಳ್ ನಾಗರಾಜ್ 
ರಾಜ್ಯ

ಕನ್ನಡವನ್ನು ಹಾಳು ಮಾಡೊ ಏಕೈಕ ಮುಖ್ಯಮಂತ್ರಿ ಇದ್ದರೆ ಅದು ಯಡಿಯೂರಪ್ಪ: ವಾಟಾಳ್ ನಾಗರಾಜ್

ಡಿಸೆಂಬರ್ 5ಕ್ಕೆ ಹಿಂದೆಂದೂ ನಡೆಯದ ರೀತಿಯಲ್ಲಿ ಕರ್ನಾಟಕ ಬಂದ್ ನಡೆಯುತ್ತದೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಬೆಂಗಳೂರು: ಡಿಸೆಂಬರ್ 5ಕ್ಕೆ ಹಿಂದೆಂದೂ ನಡೆಯದ ರೀತಿಯಲ್ಲಿ ಕರ್ನಾಟಕ ಬಂದ್ ನಡೆಯುತ್ತದೆ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ನಾಯಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ "ಕನ್ನಡವನ್ನು ಹಾಳು ,ಮಾಡೋ ಏಕೈಕ ಮುಖ್ಯಮಂತ್ರಿ ಎಂದರೆ ಅದು ಯಡಿಯೂರಪ್ಪ. ಯಡಿಯೂರಪ್ಪ ಅಂದರೆ ಸುಳ್ಳು, ಸುಳ್ಳು ಎಂದರೆ ಯಡುಯೂರಪ್ಪ. ಯಾರೂ ಅವರ ಮಾತು ನಂಬಬೇಡಿ." ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮರಾಠಾ ಪ್ರಾಧಿಕಾರ, ನಿಗಮಗಳು ಬಸವಕಲ್ಯಾಣ ಉಪಚುನಾವಣೆಗಾಗಿ ಯಡಿಯೂರಪ್ಪ ಆಡುತ್ತಿರುವ ನಾಟಕ ಎಂದು ವಾಟಾಳ್ ಆರೋಪಿಸಿದ್ದಾರೆ.  ಅಲ್ಲದೆ ಬಳ್ಳಾರಿಯನ್ನು ಎರಡು ಭಾಗ ಮಾಡಿದ ಸಿಎಂ ಅಧಿಕಾರದಲ್ಲಿ ಮುಂದುವರಿದರೆ ನಿಪ್ಪಾಣಿ, ಕಾರವಾರ ಮತ್ತು ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲಿದೆ ಎಂದರು.

ನಾಡಿದ್ದಿನ ಬಂದ್ ನಲ್ಲಿ 1,400 ಕನ್ನಡಪರ ಸಂಘಟನೆಗಳು ಭಾಗವಹಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇಂದು ನಗರದ  ಕೆಆರ್ ಪುರಂನಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಂದ್ ನಡೆಸಿದ ವಾಟಾಳ್ ಹಾಗೂ ಬೆಂಬಲಿಗರು ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಇದಲ್ಲದೆ  ನವೆಂಬರ್ 30ರಂದು  ಮೈಸೂರು ಬ್ಯಾಂಕ್ ಸರ್ಕಲ್ ಬಂದ್ ಗೆ ಮುನ್ನ ಬೃಹತ್ ಸಭೆ ಆಯೋಜಿಸಲು ಕನ್ನಡಪರ ಸಂಘಟನೆಗಳು ಇಂದು ತೀರ್ಮಾನ ತೆಗೆದುಕೊಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar Election Results 2025 Live: 208 ಸ್ಥಾನಗಳಲ್ಲಿ NDA ಮುನ್ನಡೆ; ಇಂಡಿಯಾ ಬಣ, ಪ್ರಶಾಂತ್ ಕಿಶೋರ್ ಗೆ ಮುಖಭಂಗ

Bihar Elections 2025: ಸೋಲಿನಲ್ಲೂ ದಾಖಲೆ ಬರೆದ ಕಾಂಗ್ರೆಸ್; ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದ ಕ್ಷೇತ್ರಗಳಲ್ಲಿ ಶೇ.100 ಸೋಲು!

Bihar Election Results 2025: INDIA ಮುಖ್ಯಮಂತ್ರಿ ಅಭ್ಯರ್ಥಿಗೇ ತೀವ್ರ ಮುಖಭಂಗ, ಸೋಲಿನ ಹಾದಿಯಲ್ಲಿ ತೇಜಸ್ವಿ ಯಾದವ್!

Assembly bypolls: ಜುಬಿಲಿ ಹಿಲ್ಸ್‌ನಲ್ಲಿ ಕಾಂಗ್ರೆಸ್ ಮುನ್ನಡೆ; ನಗ್ರೋಟಾದಲ್ಲಿ ಬಿಜೆಪಿ ಗೆಲುವು; ಬುಡ್ಗಾಮ್‌ನಲ್ಲಿ ಪಿಡಿಪಿ ಮುನ್ನಡೆ

ಬಿಹಾರ ಚುನಾವಣೆ; 'ಮೋದಿಯ ಹನುಮಾನ್' ಚಿರಾಗ್ ಪಾಸ್ವಾನ್ ಮೋಡಿ; 29ರಲ್ಲಿ 22 ಸ್ಥಾನಗಳಲ್ಲಿ ಮುನ್ನಡೆ!

SCROLL FOR NEXT