ಸಂಗ್ರಹ ಚಿತ್ರ 
ರಾಜ್ಯ

ಹಬ್ಬದ ವಿಶೇಷ ರೈಲು ಸೇವೆ ಡಿಸೆಂಬರ್ ಅಂತ್ಯದವರೆಗೂ ವಿಸ್ತರಣೆ: ನೈಋತ್ಯ ರೈಲ್ವೆ

ನೈಋತ್ಯ ರೈಲ್ವೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾರಿ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ನಗರಗಳಿಗೆ ಕಾರ್ಯಾಚರಿಸಿದ್ದ ವಿಶೇಷ ರೈಲುಗಳ ಸಂಚಾರವನ್ನು ಡಿಸೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗಿದೆ. 

ಬೆಂಗಳೂರು: ನೈಋತ್ಯ ರೈಲ್ವೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾರಿ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ನಗರಗಳಿಗೆ ಕಾರ್ಯಾಚರಿಸಿದ್ದ ವಿಶೇಷ ರೈಲುಗಳ ಸಂಚಾರವನ್ನು ಡಿಸೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗಿದೆ. 

ಕೆಎಸ್ಆರ್ ಬೆಂಗಳೂರು ಬೋಧಪರ ನಡುವೆ ವಾರಕ್ಕೆ 2 ಬಾರಿ ಸಂಚಾರ ನಡೆಸುವ ರೈಲನ್ನು ಡಿಸೆಂಬರ್ 30ರವರೆಗೂ ವಿಸ್ತರಣೆ ಮಾಡಲಾಗಿದೆ. ಜೋಧಪುರ ಕೆಎಸ್ಆರ್ ಬೆಂಗಳೂರು ರೈಲನ್ನು 2021ರ ಜನವರಿ 2ರ ವರೆಗೂ ವಿಸ್ತರಿಸಲಾಗಿದೆ. 

ಮೈಸೂರು ಅಜ್ಮೀರ್ ನಡುವೆ ವಾರಕ್ಕೆ ಎರಡು ಬಾರಿ ಸಂಚಾರ ನಡೆಸುವ ಹಬ್ಬದ ವಿಶೇಷ ರೈಲನ್ನು ಡಿ.31ರ ವರೆಗೂ ವಿಸ್ತರಣೆ ಮಾಡಲಾಗಿದೆ. ಅಜ್ಮೀರ್ ಮೈಸೂರು ನಡುವಿನ ರೈಲನ್ನು ಜ.3ರವರೆಗೂ ವಿಸ್ತರಣೆ ಮಾಡಲಾಗಿದೆ. 

ಮೈಸೂರು ಟ್ಯುಟಿಕಾರಿನ್ ಪ್ರತಿದಿನದ ರೈಲು, ಕೆಎಸ್ಆರ್ ಬೆಂಗಳೂರು ಕನ್ಯಾಕುಮಾರಿ ಪ್ರತಿದಿನದ ರೈಲು, ಕನ್ಯಾಕುಮಾರಿ ಕೆಎಸ್ಆರ್ ಬೆಂಗಳೂರು ಪ್ರತಿದಿನದ ರೈಲು, ಬೆಂಗಳೂರು ಕಂಟೋನ್ಮೆಂಟ್ ಭುವನೇಶ್ವರ ಮಂಗಳವಾರದ ರೈಲು, ಭುವನೇಶ್ವರ ಬೆಂಗಳೂರು ಕಂಟೋನ್ಮೆಂಟ್ ಭಾನುವಾರದ ರೈಲನ್ನು ಸಹ ವಿಸ್ತರಣೆ ಮಾಡಲಾಗಿದೆ. 

ವಿಶೇಷ ರೈಲುಗಳಲ್ಲಿ ಪ್ರಯಾಣಿಸಲು ಹಿಂದಿನಂತೆ 10 ದಿನಕ್ಕೂ ಮುಂಚಿತವಾಗಿ ಮುಂಗಡ ಟಿಕೆಟ್ ಕಾಯ್ದಿರಿಸಬೇಕು. ವಿಶೇಷ ಪ್ರಯಾಣ ದರವೇ ಈ ರೈಲುಗಳಿಗೆ ಅನ್ವಯವಾಗಲಿದೆ. ಪ್ರಯಾಣಿಕರು ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ನೈಋತ್ಯ ರೈಲ್ವೇ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT