ಸಂಗ್ರಹ ಚಿತ್ರ 
ರಾಜ್ಯ

ಹಬ್ಬದ ವಿಶೇಷ ರೈಲು ಸೇವೆ ಡಿಸೆಂಬರ್ ಅಂತ್ಯದವರೆಗೂ ವಿಸ್ತರಣೆ: ನೈಋತ್ಯ ರೈಲ್ವೆ

ನೈಋತ್ಯ ರೈಲ್ವೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾರಿ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ನಗರಗಳಿಗೆ ಕಾರ್ಯಾಚರಿಸಿದ್ದ ವಿಶೇಷ ರೈಲುಗಳ ಸಂಚಾರವನ್ನು ಡಿಸೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗಿದೆ. 

ಬೆಂಗಳೂರು: ನೈಋತ್ಯ ರೈಲ್ವೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾರಿ ರಾಜ್ಯ ಹಾಗೂ ಹೊರ ರಾಜ್ಯದ ವಿವಿಧ ನಗರಗಳಿಗೆ ಕಾರ್ಯಾಚರಿಸಿದ್ದ ವಿಶೇಷ ರೈಲುಗಳ ಸಂಚಾರವನ್ನು ಡಿಸೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗಿದೆ. 

ಕೆಎಸ್ಆರ್ ಬೆಂಗಳೂರು ಬೋಧಪರ ನಡುವೆ ವಾರಕ್ಕೆ 2 ಬಾರಿ ಸಂಚಾರ ನಡೆಸುವ ರೈಲನ್ನು ಡಿಸೆಂಬರ್ 30ರವರೆಗೂ ವಿಸ್ತರಣೆ ಮಾಡಲಾಗಿದೆ. ಜೋಧಪುರ ಕೆಎಸ್ಆರ್ ಬೆಂಗಳೂರು ರೈಲನ್ನು 2021ರ ಜನವರಿ 2ರ ವರೆಗೂ ವಿಸ್ತರಿಸಲಾಗಿದೆ. 

ಮೈಸೂರು ಅಜ್ಮೀರ್ ನಡುವೆ ವಾರಕ್ಕೆ ಎರಡು ಬಾರಿ ಸಂಚಾರ ನಡೆಸುವ ಹಬ್ಬದ ವಿಶೇಷ ರೈಲನ್ನು ಡಿ.31ರ ವರೆಗೂ ವಿಸ್ತರಣೆ ಮಾಡಲಾಗಿದೆ. ಅಜ್ಮೀರ್ ಮೈಸೂರು ನಡುವಿನ ರೈಲನ್ನು ಜ.3ರವರೆಗೂ ವಿಸ್ತರಣೆ ಮಾಡಲಾಗಿದೆ. 

ಮೈಸೂರು ಟ್ಯುಟಿಕಾರಿನ್ ಪ್ರತಿದಿನದ ರೈಲು, ಕೆಎಸ್ಆರ್ ಬೆಂಗಳೂರು ಕನ್ಯಾಕುಮಾರಿ ಪ್ರತಿದಿನದ ರೈಲು, ಕನ್ಯಾಕುಮಾರಿ ಕೆಎಸ್ಆರ್ ಬೆಂಗಳೂರು ಪ್ರತಿದಿನದ ರೈಲು, ಬೆಂಗಳೂರು ಕಂಟೋನ್ಮೆಂಟ್ ಭುವನೇಶ್ವರ ಮಂಗಳವಾರದ ರೈಲು, ಭುವನೇಶ್ವರ ಬೆಂಗಳೂರು ಕಂಟೋನ್ಮೆಂಟ್ ಭಾನುವಾರದ ರೈಲನ್ನು ಸಹ ವಿಸ್ತರಣೆ ಮಾಡಲಾಗಿದೆ. 

ವಿಶೇಷ ರೈಲುಗಳಲ್ಲಿ ಪ್ರಯಾಣಿಸಲು ಹಿಂದಿನಂತೆ 10 ದಿನಕ್ಕೂ ಮುಂಚಿತವಾಗಿ ಮುಂಗಡ ಟಿಕೆಟ್ ಕಾಯ್ದಿರಿಸಬೇಕು. ವಿಶೇಷ ಪ್ರಯಾಣ ದರವೇ ಈ ರೈಲುಗಳಿಗೆ ಅನ್ವಯವಾಗಲಿದೆ. ಪ್ರಯಾಣಿಕರು ಕೊರೋನಾ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ನೈಋತ್ಯ ರೈಲ್ವೇ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT