ರಾಜ್ಯ

ಯುವಕರ ನಡುವೆ ವಾಗ್ವಾದ: ಸಿಲಿಕಾನ್ ಸಿಟಿಯಲ್ಲಿ ಮಧ್ಯರಾತ್ರಿ ವ್ಯಕ್ತಿ ಕೊಲೆ

ವಾಗ್ವಾದವೊಂದು ಅತಿರೇಕಕ್ಕೆ ತಿರುಗಿ‌ ವ್ಯಕ್ತಿಯೋರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಗಂಗೋಡನಹಳ್ಳಿ ಮಾರಮ್ಮನ ದೇವಸ್ಥಾನದ ಬಳಿ ಶನಿವಾರ ಮಧ್ಯರಾತ್ರಿ ನಡೆದಿದೆ.

ಬೆಂಗಳೂರು: ವಾಗ್ವಾದವೊಂದು ಅತಿರೇಕಕ್ಕೆ ತಿರುಗಿ‌ ವ್ಯಕ್ತಿಯೋರ್ವನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಗಂಗೋಡನಹಳ್ಳಿ ಮಾರಮ್ಮನ ದೇವಸ್ಥಾನದ ಬಳಿ ಶನಿವಾರ ಮಧ್ಯರಾತ್ರಿ ನಡೆದಿದೆ.

ವಾಗ್ವಾದದಲ್ಲಿ ತೊಡಗಿಸಿಕೊಂಡಿದ್ದ ದುಷ್ಕರ್ಮಿಗಳು ಅಬ್ದುಲ್ ಸಾಹೀಲ್ ಎಂಬಾತನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಸಾಹೀಲ್ ಶನಿವಾರ ರಾತ್ರಿ ಏರಿಯಾ ಯುವಕರೊಂದಿಗೆ ವಾಗ್ವಾದ ನಡೆಸಿದ್ದನು. ಈ ಘಟನೆ ನಡೆದ ನಂತರ ಮಧ್ಯರಾತ್ರಿ 12.30ರ ಸುಮಾರಿಗೆ ಸ್ಥಳಕ್ಕೆ ಆಗಮಿಸಿದ ಮೂರ್ನಾಲ್ಕು ಜನರ ತಂಡ ಮಾರಕಾಸ್ತ್ರಗಳಿಂದ ಸಾಹಿಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದೆ. 

ಘಟನೆ ಬಗೆಗೆ ಮಾಹಿತಿ ಪಡೆದ ಸಾಹೀಲ್ ಕುಟುಂಬ ಸದಸ್ಯರು ಆತನನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆಸ್ಪತ್ರೆಗೆ ಸೇರುವ ಮುನ್ನವೇ ಆತ ಕೊನೆಯುಸಿರೆಳೆದಿದ್ದಾನೆ.  ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಸಾಹೀಲ್ ಹತ್ಯೆ ಕುರಿತಂತೆ  ಚಂದ್ರಾ ಲೇಔಟ್​ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT