ವಿವಾದಕ್ಕೆಡೆಯಾದ ಗೋಡೆಬರಹ 
ರಾಜ್ಯ

ಮಂಗಳೂರು: ಕೋರ್ಟ್ ಆವರಣದಲ್ಲಿ ಮತ್ತೊಂದು ವಿವಾದಾತ್ಮಕ ಗೋಡೆಬರಹ ಪತ್ತೆ

ಕರಾವಳಿ ನಗರಿ ಮಂಗಳೂರಿನಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಪ್ರಚೋದನಾಕಾರಿ ಬರಹ ಬರೆದು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಘಟನೆ ವರದಿಯಾಗುತ್ತಲಿದೆ. ಇದೇ ಬಗೆಯ ಘಟನೆ ಮತ್ತೆ ಘಟಿಸಿದ್ದು ಈ ಬಾರಿ ನಗರದ ನ್ಯಾಯಾಲಯದ ಆವರಣವೊಂದರ ಮೇಲೆ ಉರ್ದು ಭಾಷೆಯ ಸಾಲುಗಳನ್ನು ಬರೆಯಲಾಗಿದೆ.

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇತ್ತೀಚೆಗೆ ದುಷ್ಕರ್ಮಿಗಳು ಪ್ರಚೋದನಾಕಾರಿ ಬರಹ ಬರೆದು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಘಟನೆ ವರದಿಯಾಗುತ್ತಲಿದೆ. ಇದೇ ಬಗೆಯ ಘಟನೆ ಮತ್ತೆ ಘಟಿಸಿದ್ದು ಈ ಬಾರಿ ನಗರದ ನ್ಯಾಯಾಲಯದ ಆವರಣವೊಂದರ ಮೇಲೆ ಉರ್ದು ಭಾಷೆಯ ಸಾಲುಗಳನ್ನು ಬರೆಯಲಾಗಿದೆ.

ನವೆಂಬರ್ 29 ರ ಭಾನುವಾರ ಬೆಳಿಗ್ಗೆ, ನ್ಯಾಯಾಲಯದ ಆವರಣದಲ್ಲಿರುವ ಹಳೆಯ ಪೊಲೀಸ್ ಔಟ್ ಪೋಸ್ಟ್ ನ ಗೋಡೆಯ ಮೇಲೆ ವಿವಾದಾತ್ಮಕ ಬರಹ ಪತ್ತೆಯಾಗಿದೆ. ನವೆಂಬರ್ 28 ರ ಶನಿವಾರ ಬರೆಯಲಾಗಿದೆ ಎನ್ನಲಾದ ಈ ಬರಹ ಭಾನುವಾರ ಎಲ್ಲರ ಗಮನಕ್ಕೆ ಬಂದಿದೆ. 

ಉರ್ದು ಭಾಷೆಯ ಈ ಸಾಲುಗಳನ್ನು ಇಂಗ್ಲಿಷ್ ಲಿಪಿಯಲ್ಲಿ ಬರೆದಿದೆ. 'ಗುಸ್ತಾಕ್ ಇ ರಸೂಲ್ ಕಿ ಇಕ್ ಹಿ ಸಾಜಾ, ಸಾರ್ ತನ್ ಸೇ ಜುಡಾ' (ಪ್ರವಾದಿಗೆ ಕೋಪ ಬಂದರೆ ದೇಹದಿಂದ ತಲೆ ಬೇರ್ಪಡುವುದೊಂದೇ ಶಿಕ್ಷೆ) ಎಂದು ಕಿಡಿಗೇಡಿಗಳು ಬರೆದಿರುವುದು ಇದೀಗ ಹೊಸ ವಿವಾದಕ್ಕೆ ನಾಂದಿಯಾಗಿದೆ. 

ಈ ಬಗ್ಗೆ ಮಾಹಿತಿ ತಿಳಿದೊಡನೆ ಬಂದರು ಪೋಲೀಸ್ ಠಾಣೆಯ ಪೋಲೀಸರು ಸ್ಥಳಕ್ಕೆ ಆಗಮಿಸಿ ವಿವಾದಾತ್ಮಕ ಬರಹ ಅಳಿಸಿ ಹಾಕಿದ್ದಾರೆ ಮತ್ತು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಇದಕ್ಕೆ ಹಿಂದೆ ನವೆಂಬರ್ 27 ಶುಕ್ರವಾರ, ಬಿಜೈನ ಅಪಾರ್ಟ್ ಮೆಂಟ್ ನ ಗೋಡೆಯೊಂದರ ಮೇಲೆ ಉಗ್ರ ಸಂಘಟನೆಗಳನ್ನು ಬೆಂಬಲಿಸುವ ಇಂತಹುದೇ ವಿವಾದಾತ್ಮಕ ಬರಹ ಕಂಡುಬಂದಿತ್ತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT