ಮಹಾದಾಯಿ ನದಿ ನೀರು 
ರಾಜ್ಯ

ಮಹಾದಾಯಿ ನದಿ ಹರಿವನ್ನು ಕರ್ನಾಟಕ ತಿರುವು ಮಾಡಿದ್ದರಿಂದ ನೀರಿನ ಮಟ್ಟ ಕಡಿಮೆಯಾಗಿದೆ: ಗೋವಾ ಸಿಎಂ ಆರೋಪ 

ಕಳಸಾ-ಬಂಡೂರಿ ನಾಲಾ ಯೋಜನೆ ಮೂಲಕ ನೀರನ್ನು ಬದಲಾಯಿಸುವ ಮೂಲಕ ಮಹಾದಾಯಿ ನದಿ ನೀರಿನ ಮಟ್ಟವನ್ನು ಕರ್ನಾಟಕ ತಗ್ಗಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆರೋಪಿಸಿದ್ದಾರೆ. 

ಬೆಳಗಾವಿ: ಕಳಸಾ-ಬಂಡೂರಿ ನಾಲಾ ಯೋಜನೆ ಮೂಲಕ ನೀರನ್ನು ಬದಲಾಯಿಸುವ ಮೂಲಕ ಮಹಾದಾಯಿ ನದಿ ನೀರಿನ ಮಟ್ಟವನ್ನು ಕರ್ನಾಟಕ ತಗ್ಗಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆರೋಪಿಸಿದ್ದಾರೆ. 

ನೀರಿನ ಹಂಚಿಕೆ ವಿವಾದ ಇತ್ಯರ್ಥವನ್ನು ಕೋರ್ಟ್ ನಿಂದ ಹೊರಗೆ ಬಗೆಹರಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಕರ್ನಾಟಕ ಸರ್ಕಾರ ಪ್ರಯತ್ನಿಸುತ್ತಿದ್ದರೂ, ತಮ್ಮ ಸರ್ಕಾರ ಯಾವುದೇ ರಾಜಿ ಸಂಧಾನಕ್ಕೆ ಬರುವುದಿಲ್ಲ, ಮಹಾದಾಯಿ ವಿವಾದವನ್ನು ಸುಪ್ರೀಂ ಕೋರ್ಟ್ ಮೂಲಕವೇ ಬಗೆಹರಿಸಿಕೊಳ್ಳಬೇಕು ಎಂದು ಗೋವಾ ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ.

ದೆಹಲಿಯಲ್ಲಿ ಕರ್ನಾಟಕದ ಪ್ರತಿನಿಧಿ ಶಂಕರಗೌಡ ಪಾಟೀಲ್ ಹೇಳಿಕೆ ಹೊರಡಿಸಿ ಎರಡೂ ರಾಜ್ಯಗಳ ಮಧ್ಯೆ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿ ಸಂಬಂಧವನ್ನು ವೃದ್ಧಿಪಡಿಸಲು ಗೋವಾ ಮುಖ್ಯಮಂತ್ರಿ ಉತ್ಸುಕವಾಗಿದ್ದಾರೆ ಎಂದು ಹೇಳಿಕೆ ಹೊರಡಿಸಿದ ಹಿನ್ನೆಲೆಯಲ್ಲಿ ಗೋವಾ ಸಿಎಂ ಡಾ ಸಾವಂತ್ ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಗೋವಾ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದ ಶಂಕರಗೌಡ ಪಾಟೀಲ್, ಎರಡೂ ರಾಜ್ಯಗಳ ನಡುವೆ ಸಂಬಂಧಪಟ್ಟ ಹಲವು ಸಾಮಾಜಿಕ ಮತ್ತು ಆರ್ಥಿಕ ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT