ಸುಧಾಮೂರ್ತಿ 
ರಾಜ್ಯ

ಮೈಸೂರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ ಸುಧಾ ಮೂರ್ತಿ

ಸಾಂಸ್ಕೃತಿಕ ನಗರಿ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳ ಪಾಲನೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳ ಪಾಲನೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಗುರುವಾರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರಣಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದು, ಸುಧಾ ಮೂರ್ತಿ ಅವರು ಕಳೆದ ಮೇ ತಿಂಗಳಲ್ಲಿ 20 ಲಕ್ಷ ರೂ. ನೀಡಿರುವುದಾಗಿ ಹೇಳಿದ್ದಾರೆ.

ಕೋವಿಡ್ -19 ರ ಕಷ್ಟದ ಸಮಯದಲ್ಲಿ ಸುಧಾ ಮೂರ್ತಿಯವರ ಈ ರೀತಿಯ ಉದಾರವಾದ ದೇಣಿಗೆ ಅತ್ಯಮೂಲ್ಯ ಮತ್ತು ಇತರರಿಗೆ ಸ್ಫೂರ್ತಿಯಾಗಿದೆ.

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣೆಯ ಮುಖ್ಯ ಆದಾಯ ಪ್ರವಾಸಿಗರ ಪ್ರವೇಶ ಶುಲ್ಕವಾಗಿತ್ತು. ಆದರೆ, ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಪ್ರವಾಸಿಗರಿಲ್ಲದೆ ಮೃಗಾಲಯದ ನಿರ್ವಹಣೆ ಭವಿಷ್ಯದಲ್ಲಿಕ ಷ್ಟಕರವಾಗಲಿದೆ. ಈ ಹಿನ್ನೆಲೆಯಲ್ಲಿ ನೆರವಿನ ಹಸ್ತ ನೀಡುವಂತೆ ಇನ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ಜಿಲ್ಲಾಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಡಾ.ಸುಧಾ ಮೂರ್ತಿ ಅವರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT