ಸುಧಾಮೂರ್ತಿ 
ರಾಜ್ಯ

ಮೈಸೂರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ ಸುಧಾ ಮೂರ್ತಿ

ಸಾಂಸ್ಕೃತಿಕ ನಗರಿ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳ ಪಾಲನೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಮೃಗಾಲಯದಲ್ಲಿ ಪ್ರಾಣಿಗಳ ಪಾಲನೆಗಾಗಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಗುರುವಾರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರಣಿ ಅವರು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದ್ದು, ಸುಧಾ ಮೂರ್ತಿ ಅವರು ಕಳೆದ ಮೇ ತಿಂಗಳಲ್ಲಿ 20 ಲಕ್ಷ ರೂ. ನೀಡಿರುವುದಾಗಿ ಹೇಳಿದ್ದಾರೆ.

ಕೋವಿಡ್ -19 ರ ಕಷ್ಟದ ಸಮಯದಲ್ಲಿ ಸುಧಾ ಮೂರ್ತಿಯವರ ಈ ರೀತಿಯ ಉದಾರವಾದ ದೇಣಿಗೆ ಅತ್ಯಮೂಲ್ಯ ಮತ್ತು ಇತರರಿಗೆ ಸ್ಫೂರ್ತಿಯಾಗಿದೆ.

ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣೆಯ ಮುಖ್ಯ ಆದಾಯ ಪ್ರವಾಸಿಗರ ಪ್ರವೇಶ ಶುಲ್ಕವಾಗಿತ್ತು. ಆದರೆ, ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಪ್ರವಾಸಿಗರಿಲ್ಲದೆ ಮೃಗಾಲಯದ ನಿರ್ವಹಣೆ ಭವಿಷ್ಯದಲ್ಲಿಕ ಷ್ಟಕರವಾಗಲಿದೆ. ಈ ಹಿನ್ನೆಲೆಯಲ್ಲಿ ನೆರವಿನ ಹಸ್ತ ನೀಡುವಂತೆ ಇನ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ಜಿಲ್ಲಾಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಡಾ.ಸುಧಾ ಮೂರ್ತಿ ಅವರು ಮೃಗಾಲಯಕ್ಕೆ 20 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT