ರಾಜ್ಯ

ಗಜಪಡೆ ಅರಮನೆ ಪ್ರವೇಶ, ಗರಿಗೆದರಿದ ದಸರಾ ಚಟುವಟಿಕೆ

Srinivas Rao BV

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ಶುಕ್ರವಾರ ಅರಮನೆ ಅಂಗಳವನ್ನು ಆನೆಗಳು ಪ್ರವೇಶಿಸಿವೆ. 

ಮಧ್ಯಾಹ್ನ 12.18ರಿಂದ 12.40ರ ಧನುರ್ ಲಗ್ನದಲ್ಲಿ ಸ್ವಾಗತ ಕಾರ್ಯಕ್ರಮ ನೆರವೇರಲಿದ್ದು, ಅರಮನೆ ಜಯಮಾರ್ತಾಂಡ ದ್ವಾರದಲ್ಲಿ ಜಿಲ್ಲಾ ಉಸ್ತವಾರಿ ಸಚಿವ ಎಸ್.ಟಿ.ಸೋಮಶೇಖರ್ ಗಜಪಡೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಿದ್ದಾರೆ
 
ಇದರೊಂದಿಗೆ ಸಾಂಸ್ಕೃತಿಕ ನಗರಿಯಲ್ಲಿ ದಸರಾ ಚಟುವಟಿಕೆಗಳು ನಿಧಾನವಾಗಿ ಗರಿಗೆದರಲಿವೆ. ನಾಡಹಬ್ಬ ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆ ಪಯಣಕ್ಕೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪ್ರವೇಶ ದ್ವಾರದ ಬಳಿ ನಿನ್ನೆ ವಿಧ್ಯುಕ್ತ ಚಾಲನೆ ನೀಡಲಾಗಿತ್ತು. 

SCROLL FOR NEXT