ರಾಜ್ಯ

200 ದಿನಗಳ ನಂತರ ಭಕ್ತರಿಗೆ ಮಂತ್ರಾಲಯದಲ್ಲಿ ಗುರುರಾಯರ ದರ್ಶನ

ಗುರು ರಾಘವೇಂದ್ರಸ್ವಾಮಿಗಳ ದಿವ್ಯ ಸಾನ್ನಿದ್ಯವಿರುವ ಮಂತ್ರಾಲಯ ರಾಘವೇಂದ್ರ ಮಠದ ಆವರಣವನ್ನು 200  ದಿನಗಳ ನಂತರ ಇಂದು ಭಕ್ತರಿಗೆ ಮುಕ್ತಗೊಳಿಸಲಾಗಿದೆ.

ರಾಯಚೂರು: ಗುರು ರಾಘವೇಂದ್ರಸ್ವಾಮಿಗಳ ದಿವ್ಯ ಸಾನ್ನಿದ್ಯವಿರುವ ಮಂತ್ರಾಲಯ ರಾಘವೇಂದ್ರ ಮಠದ ಆವರಣವನ್ನು 200  ದಿನಗಳ ನಂತರ ಇಂದು ಭಕ್ತರಿಗೆ ಮುಕ್ತಗೊಳಿಸಲಾಗಿದೆ.

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಯರ ದರ್ಶನವನ್ನು ನಿಷೇಧಿಸಿದ್ದ ಮಠ ಇಂದು ಪುನಃ ಭಕ್ತರಿಗೆ ರಾಯರ ದರ್ಶನ ಮಾಡಲು ಅವಕಾಶ ಕಲ್ಪಿಸಿದೆ.

ಮಠದ ಮುಖ್ಯದ್ವಾರವನ್ನಿಂದು ತೆರೆದ ಹಿನ್ನೆಲೆ ಮಠದ ಪೀಠಾಧಿಪತಿ ಶ್ರೀಸುಭುದೇಂದ್ರ ತೀರ್ಥರು ರಾಯರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಬೆಳಗ್ಗೆ 8 ರಿಂದ ಸಂಜೆ 4 ರವರೆಗೆ ಭಕ್ತಾದಿಗಳಿಗೆ ರಾಯರ ದರ್ಶನಕ್ಕಾಗಿ ಅವಕಾಶ ಕಲ್ಪಿಸಲಾಗಿತ್ತು.

ಕೊರೋನಾ ಕಾರಣದಿಂದ ಮಾರ್ಚ್ 21 ರಿಂದ ರಾಯರ ವೃಂದಾವನ ದರ್ಶನ ಭಕ್ತರಿಗೆ ಇಲ್ಲವಾಗಿತ್ತು.

ಮಠಕ್ಕೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮಾಡಬೇಕಿದೆ. ಜತೆಗೆ ಕೊರೋನಾ ಕಾಲದ ನಿಯಮಾವಳಿಗಳನ್ನು ಪಾಲಿಸಬೇಕು ಎಂದು ಮಠದ ಪ್ರಕಟಣೆ ಹೇಳಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

NICE ವಿವಾದ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ; ಮಾಜಿ ಪ್ರಧಾನಿ ಪತ್ರಕ್ಕೆ CM ಡಿಕೆಶಿ ತಿರುಗೇಟು

ಸಾಕು ಮಾಡಿ: ಸೇವಾಶ್ರಯ ಪ್ರಕರಣದಲ್ಲಿ ಕೊನೆಗೂ ಅಭಿಷೇಕ್ ಬ್ಯಾನರ್ಜಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್, ಬಂಧನಕ್ಕೆ ತಡೆ!

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌; ಶೇ. 7.5 ರಷ್ಟು ಮೀಸಲಾತಿ – ಕರಡು ನಿಯಮ ಪ್ರಕಟ

ಸ್ವಚ್ಛ ವಾಯು ಸರ್ವೇಕ್ಷಣ 2026: ಬೆಂಗಳೂರು, ಶ್ರೀನಗರ ಹಿಂದಿಕ್ಕಿದ ದೆಹಲಿ; ಅತ್ಯಂತ ಸ್ವಚ್ಛ ಗಾಳಿ ಯಾವ ನಗರದಲ್ಲಿದೆ ಗೊತ್ತಾ?

ಸತ್ಯ ನಿಕೇತನ ಪಿಜಿ ಕುಸಿತದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ದೆಹಲಿ ಹೈಕೋರ್ಟ್ ಆದೇಶ; ದುರಂತಕ್ಕೆ ಮಾಲೀಕನಷ್ಟೇ ಅಲ್ಲ MCD, DU ಸಹ ಹೊಣೆ!