ಸಾಂದರ್ಭಿಕ ಚಿತ್ರ 
ರಾಜ್ಯ

ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಹೆಚ್ಚಿನ ಬಡ್ಡಿಗೆ ಸಾಲ ಪಡೆಯುತ್ತಿರುವ ರೈತರು!

ಕೊರೋನಾ ಸಾಂಕ್ರಾಮಿಕ ರೋಗದ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಬಾಗಲಕೋಟೆಯ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದಅನೇಕ ವಿದ್ಯಾರ್ಥಿಗಳ ಕುಟುಂಬಗಳು, ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸುವ ಸಲುವಾಗಿ ಹೆಚ್ಚಿನ ಮೊತ್ತದ ಬಡ್ಡಿದರದಲ್ಲಿ ಸಾಲ ಪಡೆಯುತ್ತಿದ್ದಾರೆ.

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಬಾಗಲಕೋಟೆಯ ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯದಅನೇಕ ವಿದ್ಯಾರ್ಥಿಗಳ ಕುಟುಂಬಗಳು, ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸುವ ಸಲುವಾಗಿ ಹೆಚ್ಚಿನ ಮೊತ್ತದ ಬಡ್ಡಿದರದಲ್ಲಿ ಸಾಲ ಪಡೆಯುತ್ತಿದ್ದಾರೆ.

ಕಾಲೇಜು ಶಿಕ್ಷಣ ಕೋರ್ಸ್ ಗಳಲ್ಲಿ ಸೂಕ್ತವಾದದ್ದು ಎಂದು  ಕೃಷಿ ವಿಜ್ಞಾನವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಆದರೆ, ಈ ವರ್ಷ ಸಾಂಕ್ರಾಮಿಕ ಕಾಯಿಲೆ ಹಿನ್ನೆಲೆಯಲ್ಲಿ, ರೈತರಾಗಿರುವ ತಮ್ಮ ತಂದೆ ತಿಂಗಳಿಗೆ ಶೇ.5 ರ ಬಡ್ಡಿದರದಲ್ಲಿ 20 ಸಾವಿರ ಸಾಲ ಪಡೆದಿದ್ದಾರೆ. ಅಸಲು ಮರುಪಾವತಿ ಮಾಡುವವರೆಗೆ ಬಡ್ಡಿಯನ್ನು  ಪಾವತಿಸಬೇಕಾಗುತ್ತದೆ ಎಂದು ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಕಡೂರು ಮೂಲದ  ರಕ್ಷಿತ್ (ಹೆಸರು ಬದಲಾಯಿಸಲಾಗಿದೆ) ಅಳಲು ತೋಡಿಕೊಂಡಿದ್ದಾನೆ.

ಹಿಂದಿನ ವರ್ಷದ ಪ್ರವಾಸ, ಕಾನ್ವೋಕೇಷನ್, ಕ್ರೀಡೆ, ಮತ್ತು  ವೃತ್ತಿ ಅಭಿವೃದ್ಧಿಗೆ ಸಂಗ್ರಹಿಸಿದ ಹಣ ಖರ್ಚಾಗದ ಕಾರಣ ವಿದ್ಯಾರ್ಥಿಗಳು ಲಾಕ್‌ಡೌನ್‌ನಿಂದ ಸೆಮಿಸ್ಟರ್ ಶುಲ್ಕ ಕಡಿಮೆಯಾಗುತ್ತದೆ ಎಂದು ಭಾವಿಸಿದ್ದರು. ಆದರೆ, ಶಿಕ್ಷಣ ಇಲಾಖೆ ನಿರ್ದೇಶನದ ಹೊರತಾಗಿಯೂ ಪ್ರತಿ ಸೆಮಿಸ್ಟರ್ ಗೆ 2,700 ರೂ,ಗಳಷ್ಟು ಶುಲ್ಕವನ್ನು ವಿಶ್ವವಿದ್ಯಾನಿಲಯ ಹೆಚ್ಚಿಸಿದೆ. ಅಕ್ಟೋಬರ್ 5ರೊಳಗೆ ರಕ್ಷಿತ್ 19, 305 ರೂ.ಶುಲ್ಕವನ್ನು ಪಾವತಿಸಬೇಕಾಗಿದೆ.

ತಮ್ಮ ತಂದೆಯೂ ಕೂಡಾ ಸಾಲಕ್ಕಾಗಿ ಪರದಾಡುತ್ತಿದ್ದು, ಶುಲ್ಕವನ್ನು ಕಡಿಮೆ ಮಾಡಬೇಕೆಂದು ಡೀನ್ ಮತ್ತು ಕುಲಪತಿಗಳಲ್ಲಿ ಮನವಿ ಮಾಡಿದ್ದೇವೆ. ಆದರೂ, ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎಂದು  ಮತ್ತೋರ್ವ ವಿದ್ಯಾರ್ಥಿ ಆನಂದ್ ಕುಮಾರ್ (ಹೆಸರು ಬದಲಾಯಿಸಲಾಗಿದೆ) ತಿಳಿಸಿದ್ದಾನೆ.

ಆರು ವಿಶ್ವವಿದ್ಯಾನಿಲಯಗಳ ರಾಜ್ಯ ಮಟ್ಟದ ಸಮನ್ವಯ ಸಮಿತಿಯು ಸರ್ವಾನುಮತದಿಂದ ಶುಲ್ಕ ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಪ್ರತಿ ವರ್ಷ ಶೇಕಡಾ 5 ರಂತೆ ಶುಲ್ಕವನ್ನು ಹೆಚ್ಚಿಸಲಾಗುತ್ತಿದೆ.ಇದೇ ರೀತಿಯಲ್ಲಿ ಈ ವರ್ಷವೂ ಹೆಚ್ಚಿಸಲಾಗಿದೆ. ವಿಶ್ವವಿದ್ಯಾಲಯವನ್ನು ಹೇಗೆ ನಡೆಸುವುದು? ಸರ್ಕಾರ ಸಂಶೋಧನೆಗೆ ಮಾತ್ರ ಸಂಸ್ಥೆಗೆ ಹಣವನ್ನು ನೀಡುತ್ತದೆ ಮತ್ತು ಶಿಕ್ಷಣವು ವಿದ್ಯಾರ್ಥಿಗಳ ಶುಲ್ಕವನ್ನು ಅವಲಂಬಿಸಿರುತ್ತದೆ ಎಂದು ಕುಲಪತಿ ಇಂದಿರೇಶ್ ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT