ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ರಾತ್ರಿ ಜೊತೆಯಲ್ಲೇ ಪಾರ್ಟಿಮಾಡಿ ಸ್ನೇಹಿತನನ್ನೇ ಹತ್ಯೆಗೈದ ಸ್ನೇಹಿತರು!

ರಾತ್ರಿ ಜೊತೆಯಲ್ಲೇ ಪಾರ್ಟಿಮಾಡಿ ಸ್ನೇಹಿತರೇ ತಮ್ಮ ಸ್ನೇಹಿತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಶ್ರೀರಾಂಪುರ ಗ್ರಾಮ ಸಮೀಪದ ಕ್ರಷರ್ನಲ್ಲಿ ನಡೆದಿದೆ.

ಮಂಡ್ಯ: ರಾತ್ರಿ ಜೊತೆಯಲ್ಲೇ ಪಾರ್ಟಿಮಾಡಿ ಸ್ನೇಹಿತರೇ ತಮ್ಮ ಸ್ನೇಹಿತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಶ್ರೀರಾಂಪುರ ಗ್ರಾಮ ಸಮೀಪದ ಕ್ರಷರ್ನಲ್ಲಿ ನಡೆದಿದೆ.

ಮೂಲತಃ ಮಂಡ್ಯ ತಾಲೂಕಿನ ಉಮ್ಮಡಹಳ್ಳಿ ಗ್ರಾಮದ ಲೇಟ್ ಶ್ರೀನಿವಾಸ್ ಅವರ ಪುತ್ರ ಪೂರ್ಣಚಂದ್ರ(೨೮) ಮೃತ ದುರ್ದೈವಿಯಾಗಿದ್ದು, ಪ್ರಸ್ತುತ ಶ್ರೀರಂಗಪಟ್ಟಣ ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದ ಎನ್ನಲಾಗಿದೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಶ್ರೀರಾಂಪುರ -ಗಣಂಗೂರು ಗ್ರಾಮ ಸಮೀಪದ ತನ್ನ ಚಿಕ್ಕಪ್ಪನ ಮಗನಾದ ಹರ್ಷರವರ ಕ್ರಷರ್ ರೂಮಿನಲ್ಲಿ ಪೂರ್ಣಚಂದ್ರ ತನ್ನ ಸ್ನೇಹಿತರಾದ ಪ್ರದೀಪ್ ಮತ್ತು ಚಾಮರಾಜು ಸೇರಿದಂತೆ ಹಲವರೊಂದಿಗೆ ಶುಕ್ರವಾರ ರಾತ್ರಿ ಪಾರ್ಟಿ ಮಾಡಿದ್ದಾರೆ. ಈ ವೇಳೆ ಪಾರ್ಟಿಯಲ್ಲಿ ಮದ್ಯ ಸೇವಿಸುತ್ತಿದ್ದ ದುಷ್ಕರ್ಮಿ ಸ್ನೇಹಿತರೇ ಪೂರ್ವನಿಯೋಜನೆಯಂತೆ ಪೂರ್ಣಚಂದ್ರನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. 

ಘಟನೆಯಲ್ಲಿ ಸ್ನೇಹಿತರಾದ ಜಕ್ಕನಹಳ್ಳಿಯ ಪ್ರದೀಪ್ ಮತ್ತು ಚಾಮರಾಜು ಎಂಬುವರು ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಳೆ ದ್ವೇಷದ ಹಿನ್ನೆಲೆಯಲ್ಲಿಯೇ ಈ ದುಷ್ಕೃತ್ಯ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಬಳಿಕ ಮಾಹಿತಿ ತಿಳಿದ ಪಿಎಸ್ಐ ಗೀರಿಶ್ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದಾಖಲಾಗಿದೆ.
-ನಾಗಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT