ಸಾಂದರ್ಭಿಕ ಚಿತ್ರ 
ರಾಜ್ಯ

ನಾಲೆ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವು

ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಮಂಡ್ಯ: ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಮಹೇಶ್(೨೮) ಮೃತ ಕಾರ್ಮಿಕನಾಗಿದ್ದು, ಈತ ಮೂಲತಃ ಚಾಮರಾಜನಗರ ಜಿಲ್ಲೆಯ ಬೇಗೂರಿನ ನಿವಾಸಿ ಎಂದು ತಿಳಿದು ಬಂದಿದೆ.

ಎಂದಿನಂತೆಯೇ ಶುಕ್ರವಾರ ಬೆಳಗ್ಗೆ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆಯುತ್ತಿದ್ದ ನಾಲೆಯ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆಯೆ ನಾಲೆವಾಡೆಯ ಮಣ್ಣುರಾಶಿ ಮಹೇಶ್ ಮೇಲೆ ಕುಸಿದು ಬಿದ್ದಿದೆ. ಗಾಯಗೊಂಡಿದ್ದ ಕಾರ್ಮಿಕ ಮಹೇಶ್ನನ್ನು ಸ್ಥಳೀಯ ಪಾಂಡವಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
-ನಾಗಯ್ಯ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

ಚಿತ್ರದುರ್ಗದಲ್ಲಿ ಭೀಕರ ಆ್ಯಸಿಡ್ ದಾಳಿ: ಮಹಿಳೆ, ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ, ಆರೋಪಿಗಾಗಿ ಪೊಲೀಸರ ಶೋಧ

West Asia war: ಹಾರ್ಮುಜ್ ಜಲಸಂಧಿ 'ರೀ ಓಪನ್' ಮಾಡಲು 22 ರಾಷ್ಟ್ರಗಳು ಇರಾನ್ ಗೆ ಒತ್ತಾಯ! ಸೇನಾ ಕಾರ್ಯಾಚರಣೆ ಶೀಘ್ರ ಸ್ಥಗಿತ ಎಂದ ಅಮೆರಿಕ

IPL 2026: ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ- ಪೊಲೀಸರ ವಾರ್ನಿಂಗ್

SCROLL FOR NEXT