ಸಾಂದರ್ಭಿಕ ಚಿತ್ರ 
ರಾಜ್ಯ

ನಾಲೆ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವು

ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಮಂಡ್ಯ: ನಾಲೆಯಲ್ಲಿ ಕೆಲಸ ಮಾಡುವಾಗ ಮಣ್ಣು ಕುಸಿದು ಕಾರ್ಮಿಕ ಸಾವಿಗೀಡಾಗಿರುವ ಘಟನೆ ಪಾಂಡವಪುರ ತಾಲೂಕಿನ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆದಿದೆ.

ಮಹೇಶ್(೨೮) ಮೃತ ಕಾರ್ಮಿಕನಾಗಿದ್ದು, ಈತ ಮೂಲತಃ ಚಾಮರಾಜನಗರ ಜಿಲ್ಲೆಯ ಬೇಗೂರಿನ ನಿವಾಸಿ ಎಂದು ತಿಳಿದು ಬಂದಿದೆ.

ಎಂದಿನಂತೆಯೇ ಶುಕ್ರವಾರ ಬೆಳಗ್ಗೆ ದೇವೇಗೌಡ ಕೊಪ್ಪಲು ಗ್ರಾಮದ ಬಳಿ ನಡೆಯುತ್ತಿದ್ದ ನಾಲೆಯ ಕೆಲಸಕ್ಕೆ ತೆರಳಿದ್ದರು. ಸಂಜೆ ಕೆಲಸ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆಯೆ ನಾಲೆವಾಡೆಯ ಮಣ್ಣುರಾಶಿ ಮಹೇಶ್ ಮೇಲೆ ಕುಸಿದು ಬಿದ್ದಿದೆ. ಗಾಯಗೊಂಡಿದ್ದ ಕಾರ್ಮಿಕ ಮಹೇಶ್ನನ್ನು ಸ್ಥಳೀಯ ಪಾಂಡವಪುರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾನೆ. ಈ ಸಂಬಂಧ ಪಾಂಡವಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
-ನಾಗಯ್ಯ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮುಂದಿನ ಸಿಜೆಐ ಯಾರು?: ಉತ್ತರಾಧಿಕಾರಿ ಹೆಸರು ಕೇಂದ್ರಕ್ಕೆ ಶಿಫಾರಸು ಮಾಡಿದ ನ್ಯಾಯಮೂರ್ತಿ ಬಿ.ಆರ್. ಗವಾಯಿ

Dharmasthala Mass Burial Case: ಸಾಕ್ಷ್ಯಾಧಾರಗಳ ಕೊರತೆ, 'ಷಡ್ಯಂತ್ರ ಸೂತ್ರಧಾರರತ್ತ' ಎಸ್ ಐಟಿ ತನಿಖೆ!

ಹೈಕೋರ್ಟ್ ಸ್ಥಳಾಂತರ ಬೇಡಿಕೆ ಬಗ್ಗೆ ಪರಿಶೀಲನೆ: ಕಬ್ಬನ್ ಪಾರ್ಕ್ ಅಭಿವೃದ್ಧಿಗೆ 5 ಕೋಟಿ ಅನುದಾನ; ಡಿ.ಕೆ ಶಿವಕುಮಾರ್

RSS ರಹಸ್ಯ ಸಂಘಟನೆಯಲ್ಲ- ಶತ್ರುಗಳೂ ಇಲ್ಲ: ನೆಹರು ಮರಿಮೊಮ್ಮಕ್ಕಳು ಅರ್ಥಮಾಡಿಕೊಳ್ಳಲು ಸಮಯ ಬೇಕು; ರಾಮ್ ಮಾಧವ್

ಹಾರ್ಡ್ ಡಿಸ್ಕ್ ನಲ್ಲಿದ್ದ 'ಅಶ್ಲೀಲ' ವಿಡಿಯೋ ಡಿಲೀಟ್ ಮಾಡಲು ನಕಾರ: UPSC ಆಕಾಂಕ್ಷಿಯ ಹತ್ಯೆ! ಮೂವರ ಬಂಧನ

SCROLL FOR NEXT