ಘಟ್ಟ ಪ್ರದೇಶದಲ್ಲಿನ ರೈಲು ಹಳಿಗಳು 
ರಾಜ್ಯ

ಸಕಲೇಶಪುರ-ಸುಬ್ರಮಣ್ಯ ರಸ್ತೆಯ ಘಾಟ್ ಸೆಕ್ಷನ್ ನಲ್ಲಿ ಸಿಗ್ನಲಿಂಗ್ ಯೋಜನೆ ಮೇಲ್ದರ್ಜೆಗೆ

ಸಕಲೇಶಪುರ-ಸುಬ್ರಮಣ್ಯ ರಸ್ತೆಯ ಘಾಟ್ ಸೆಕ್ಷನ್ ನಲ್ಲಿ ಸಿಗ್ನಲಿಂಗ್ ಯೋಜನೆ ಮೇಲ್ದರ್ಜೆಗೇರಿಸಲಾಗಿದ್ದು, ಹೆಚ್ಚುವರಿ ಪ್ರಯಾಣಿಕರ ಸೇವೆ ಮತ್ತು ಸರಕು ರೈಲುಗಳನ್ನು ಓಡಿಸಲು ನೆರವಾಗಿದೆ.

ಮಂಗಳೂರು: ರೈಲ್ವೆ ಸುರಕ್ಷತಾ ಆಯುಕ್ತರು ವಿಧಿಸಿರುವ ನಿರ್ಬಂಧದಂತೆ ಸಕಲೇಶಪುರ ಮತ್ತು ಸುಬ್ರಮಣ್ಯ ರಸ್ತೆ ನಡುವಿನ 55 ಕಿ.ಮೀ ಘಾಟ್ ಸೆಕ್ಷನ್ ನಲ್ಲಿ ಹೆಚ್ಚುವರಿ ಪ್ರಯಾಣಿಕರ ಸೇವೆ ಮತ್ತು ಸರಕು ರೈಲುಗಳ ಸಂಚಾರ ಕಷ್ಟಕರವಾಗಿತ್ತು.

ರೈಲು ಕಾರ್ಯಾಚರಣೆಗೆ ಅಡ್ಡಿಯಾಗಿದ್ದ ಮೂಲಸೌಕರ್ಯ ಕೊರತೆಯನ್ನು ನಿವಾರಿಸುವ ನಿಟ್ಟಿನಲ್ಲಿ  ನೈರುತ್ಯ ರೈಲ್ವೆ  ಮೈಸೂರು ವಿಭಾಗ ಈ ವರ್ಷದ ಜೂನ್ ನಿಂದ  ಕಡಗರಾವಳ್ಳಿ ಮತ್ತು ಯೆಡಕುಮಾರಿ ನಿಲ್ದಾಣಗಳಲ್ಲಿ ಸಿಗ್ನಲಿಂಗ್ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ಮಲ್ಟಿ-ಸೆಕ್ಷನ್ ಡಿಜಿಟಲ್ ಆಕ್ಸಲ್ ಕೌಂಟರ್ (ಎಂಎಸ್‌ಡಿಎಸಿ) ಎನ್ನುವುದು ಅತ್ಯಾಧುನಿಕ ತಂತ್ರಜ್ಞಾನವಾಗಿದ್ದು, ಹೆಚ್ಚಿನ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ರೈಲು ಪತ್ತೆಗಾಗಿ ವಿನ್ಯಾಸಗೊಳಿಸಲಾಗಿದೆ.

ಹಾಸನ್- ಮಂಗಳೂರು ರೈಲ್ವೆ ಅಭಿವೃದ್ಧಿ ಕಂಪನಿ ಲಿಮಿಟೆಡ್ ದಿಂದ ರೂ .4.4 ಕೋಟಿ ವೆಚ್ಚ ಭರಿಸಿದ್ದು, ಸಕಲೇಶಪುರ-ಸುಬ್ರಮಣ್ಯದಲ್ಲಿ ಯೆಡಕುಮಾರಿ ಮತ್ತು ಕಡಗರವಳ್ಳಿ ನಿಲ್ದಾಣಗಳ ನಡುವೆ ಬಹು-ವಿಭಾಗದ ಡಿಜಿಟಲ್ ಆಕ್ಸಲ್ ಕೌಂಟರ್ (ಎಂಎಸ್‌ಡಿಎಸಿ) ತಂತ್ರಜ್ಞಾನವನ್ನು ಅಳವಡಿಸಲಾಗಿದೆ ಎಂದು ರೈಲ್ವೆಯ ಪ್ರಕಟಣೆ ತಿಳಿಸಿದೆ. 

ಇದರಿಂದಾಗಿ  ಸುಮಾರು ಶೇ. 35 ರಷ್ಟು ಸಾಮರ್ಥ್ಯ ಹೆಚ್ಚಿದಂತಾಗಿದ್ದು, ಹೆಚ್ಚುವರಿ ಪ್ರಯಾಣಿಕ ಸೇವೆ ಆರಂಭಿಸಲು ನೆರವಾಗಲಿದೆ ಮತ್ತು ಸರಕು ಸೇವಾ ರೈಲುಗಳು ಹೆಚ್ಚಿನ ದಕ್ಷತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ.ಈ ತಂತ್ರಜ್ಞಾನವನ್ನು ಅಳವಡಿಸುವಲ್ಲಿ ನೈರುತ್ಯ ರೈಲ್ವೆ ಮೈಸೂರು ವಿಭಾಗದ ಸಿಗ್ನಿಲ್ ಮತ್ತು ಟೆಲಿ ಕಮ್ಯೂನಿಕೇಷನ್ ವಿಭಾಗದ ಎಂಜಿನಿಯರ್ ಡಾ. ಶ್ರೀನಿವಾಸಲು ಮುಂಚೂಣಿಯ ಪಾತ್ರ ವಹಿಸಿದ್ದಾರೆ.

ನೂತನ ಸುರಕ್ಷತಾ ಕ್ರಮದಿಂದ ಘಾಟ್ ಸೆಕ್ಷನ್ ನಲ್ಲಿ ಸುರಕ್ಷತೆ ಹೆಚ್ಚಿದಂತಾಗಿದ್ದು, ಹೆಚ್ಚಿನ ರೈಲುಗಳು ಸಂಚರಿಸುವ ವಿಶ್ವಾಸವಿರುವುದಾಗಿ ನೈರುತ್ಯ ರೈಲ್ವೆ ಮೈಸೂರು ವಿಭಾಗದ ಡಿಆರ್ ಎಂ ಅಪರ್ಣಾ ಗಾರ್ಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT