ರಾಜ್ಯ

ತುಮಕೂರು: ಗೋಡೇಕೆರೆ ಸಂಸ್ಥಾನದ ಶ್ರೀ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ  ಲಿಂಗೈಕ್ಯ

Raghavendra Adiga

ತುಮಕೂರು: ತುಮಕೂರು ಜಿಲ್ಲೆ ಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹೆಸರಾಂತ ಮಠಗಳಲ್ಲಿ ಒಂದಾದ ಗೋಡೇಕೆರೆ ಸಂಸ್ಥಾನದ ಸ್ಥಿರ ಪಟ್ಟಾಧ್ಯಕ್ಷರಾದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ(65) ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾಗಿದ್ದಾರೆ.

ಸ್ವಾಮೀಜಿಯವರು ತಿಪಟೂರು ತಾಲ್ಲೂಕಿನ ಕೆ ಬಿ ಕ್ರಾಸ್ ಶಾಖಾ ಮಠದಲ್ಲಿ ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತ ನಿರ್ವಹಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸ್ವಾಮೀಜಿಯವರ ಸಾವಿಗೆ ಅನೇಕ ಗಣ್ಯರು, ಭಕ್ತಾದಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ

ರಮೇಶ್ ಜಾರಕಿಹೊಳಿ‌  ಸಂತಾಪ 

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಹೆಸರಾಂತ ಮಠವಾದ ಗೋಡೇಕೆರೆ ಸಂಸ್ಥಾನದ ಸ್ಥಿರ ಪಟ್ಟಾಧ್ಯಕ್ಷರಾಗಿದ್ದ ಶ್ರೀ ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮಿ ಗಳ ಅಕಾಲಿಕ ನಿಧನಕ್ಕೆ ರಾಜ್ಯದ ಶಿಕ್ಷಣ ಪ್ರೇಮಿಯಾಗಿದ್ದ ಸ್ವಾಮಿಗಳು ತಿಪಟೂರು ತಾಲ್ಲೂಕಿನ ಕೆ ಬಿ ಕ್ರಾಸ್ ಶಾಖಾ ಮಠದ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು. ಹಾಗೂ ರಂಭಾಪುರಿ ವಿದ್ಯಾಸಂಸ್ಥೆಯ ಆಡಳಿತ ನಿರ್ವಹಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದನ್ನು ಸಚಿವರು ಸ್ಮರಿಸಿಕೊಂಡಿದ್ದಾರೆ.

SCROLL FOR NEXT