ಅಗಲಿದ ಸಚಿವ ಸುರೇಶ್ ಅಂಗಡಿ ಮನೆಯಲ್ಲಿ ರಾಜ್ಯಪಾಲರು 
ರಾಜ್ಯ

ಅಗಲಿದ ಸಚಿವ ಸುರೇಶ್ ಅಂಗಡಿ ಕುಟುಂಬಕ್ಕೆ ರಾಜ್ಯಪಾಲರ ವಜುಭಾಯಿ ವಾಲಾ ಸಾಂತ್ವನ

ಇತ್ತೀಚೆಗೆ ನಿಧನರಾದ ರೈಲ್ವೆ ಸಚಿವ ಸುರೇಶ್ ಅಂಗಡಿಯವರ ಕುಟುಂಬ ಸದಸ್ಯರಿಗೆ ರಾಜ್ಯಪಾಲ ವಜುಭಾಯಿ ವಾಲಾ ಇಂದು ಬೆಳಗಾವಿಯಲ್ಲಿ ಸಾಂತ್ವನ ಹೇಳಿದರು.

ಬೆಳಗಾವಿ: ಇತ್ತೀಚೆಗೆ ನಿಧನರಾದ ರೈಲ್ವೆ ಸಚಿವ ಸುರೇಶ್ ಅಂಗಡಿಯವರ ಕುಟುಂಬ ಸದಸ್ಯರಿಗೆ ರಾಜ್ಯಪಾಲ ವಜುಭಾಯಿ ವಾಲಾ ಇಂದು ಬೆಳಗಾವಿಯಲ್ಲಿ ಸಾಂತ್ವನ ಹೇಳಿದರು.

ಬೆಳಗಾವಿಯ ಸದಾಶಿವನಗರದಲ್ಲಿರುವ ದಿವಂಗತ ಸುರೇಶ್ ಅಂಗಡಿಯವರ ಮನೆಗೆ ರಾಜ್ಯಪಾಲರು ಭೇಟಿ ನೀಡಿದ್ದರು. ಈ ವೇಳೆ ಸಚಿವ ಅಂಗಡಿ ಪತ್ನಿ, ತಾಯಿ, ಮಕ್ಕಳನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು, ಸುರೇಶ್ ಅಂಗಡಿಯವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಹೇಳಿದ್ದಾರೆ. 

ಸುರೇಶ್ ಅಂಗಡಿ ಉತ್ತಮ ಸಂಸದರಾಗಿದ್ದರು, ರೈಲ್ವೆ ಸಚಿವರಾಗಿ ಮಹತ್ವದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರು ಎಂದು ಅಂಗಡಿಯವರ ಕಾರ್ಯಶೈಲಿಯನ್ನು ರಾಜ್ಯಪಾಲರು ಶ್ಲಾಘಿಸಿದ್ದಾರೆ. 

ಇದೇ ವೇಳೆ ಅಗಲಿದ ಸಚಿವರ ಪುತ್ರಿಯರ ಶಿಕ್ಷಣಕ್ಕೆ ಸಹಾಯ ಬೇಕಾದಲ್ಲಿ ರಾಜ್ಯಪಾಲರ ಕಚೇರಿಯನ್ನು ಸಂಪರ್ಕಿಸುವಂತೆ ಸಹ ಕುಟುಂಬಸ್ಥರಿಗೆ ರಾಜ್ಯಪಾಲರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT