ಹೆಚ್.ಡಿ.ಕುಮಾರಸ್ವಾಮಿ 
ರಾಜ್ಯ

ವಿವಿಧ ಕಚೇರಿಗಳಿಗೆ ಜಾಗ ನೀಡಿದರೆ ಬೆಂಗಳೂರು ವಿವಿಯ ಜೀವ ವೈವಿಧ್ಯ ತಾಣಕ್ಕೆ ಕುತ್ತು: ಎಚ್‍ಡಿ ಕುಮಾರಸ್ವಾಮಿ

ಬೆಂಗಳೂರು ವಿಶ್ವವಿದ್ಯಾಲಯ ಆವರಣದ 32 ಎಕೆರ ಜಾಗವನ್ನು ವಿವಿಧ ಕಚೇರಿಗಳಿಗೆ ನೀಡುವ ಸರ್ಕಾರದ ನಿಲುವಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಆವರಣದ 32 ಎಕೆರ ಜಾಗವನ್ನು ವಿವಿಧ ಕಚೇರಿಗಳಿಗೆ ನೀಡುವ ಸರ್ಕಾರದ ನಿಲುವಿಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಜೀವ ವೈವಿಧ್ಯದ ತಾಣವಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಸರ್ಕಾರದ ನಿರ್ಧಾರವನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

'ಸುಮಾರು ಎರಡು ದಶಕಗಳಿಂದ ಪರಿಸರ ತಜ್ಞರು ಶ್ರಮವಹಿಸಿ ಬೆಳೆಸಿದ ಈ ತಾಣವನ್ನು ಸರ್ಕಾರ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ನಿರ್ಧಾರ ಕೈಗೊಂಡಿರುವುದು ತೀವ್ರ ಅಪಾಯಕಾರಿ. ಹಿರಿಯ ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಅವರು ತಮಗೆ ಸರ್ಕಾರ ನೀಡಿದ್ದ  ಗೌರವ ಡಾಕ್ಟರೇಟ್ ಹಿಂತಿರುಗಿಸುವ ಮೂಲಕ ತಮ್ಮ ಸಾತ್ವಿಕ ಸಿಟ್ಟನ್ನು ಪ್ರಕಟಿಸಿದ್ದಾರೆ. ಇದಕ್ಕೆ ಪರಿಸರ ಪ್ರೇಮಿಗಳು ಬೆಂಬಲ ಸೂಚಿಸಿದ್ದಾರೆ. ಯೋಗ ವಿವಿಗೆ 15 ಎಕರೆ, ಗುಲ್ಬರ್ಗಾ ವಿವಿಗೆ 15 ಎಕರೆ, ಸಿಬಿಎಸ್‍ಸಿ ದಕ್ಷಿಣ ಭಾರತದ ಕಚೇರಿಗೆ 2 ಎಕರೆ ಸೇರಿದಂತೆ ಒಟ್ಟು 32 ಎಕರೆಯನ್ನು ನೀಡಿರುವ ಕ್ರಮದಿಂದ  ಬೆಂಗಳೂರು ವಿವಿ ಆವರಣ ಕಾಂಕ್ರೀಟ್ ಕಾಡಾಗಲಿದೆ.

ಈ ಸಂಸ್ಥೆಗಳಿಗೆ ಬೇರೆ ಕಡೆ ಸ್ಥಳ ನೀಡುವ ಮೂಲಕ ಈ ಜೀವವೈವಿಧ್ಯ ತಾಣವನ್ನು ಸರ್ಕಾರ ಉಳಿಸಬೇಕು. ಬೆಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ ಕಳೆದ 20 ವರ್ಷಗಳಲ್ಲಿ ನಿರ್ಮಾಣಗೊಂಡ  ಜೀವ ವೈವಿಧ್ಯ ವನದ ನಡುವೆ ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ವಿವಿ ಮತ್ತು ಸರ್ಕಾರದ ಕ್ರಮ ಖಂಡನೀಯ. ಇದರಿಂದ ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎಂಬಂತೆ ಇಡೀ ಸಸ್ಯ ಸಂಪತ್ತು ನಾಶವಾಗಲಿದೆ ಎಂದು ಎಚ್ ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಹಿಂದೆ ಉಪಕುಲಪತಿಗಳಾಗಿದ್ದ ಡಾ.ಕೆ.ಸಿದ್ದಪ್ಪನವರು ಇದೊಂದು ಬಯಲು ಪ್ರಯೋಗಾಲಯವಾಗಲಿದೆ ಎಂದು ನಿರೀಕ್ಷಿಸಿ ಜೀವ ವೈವಿಧ್ಯವನಕ್ಕೆ ಚಾಲನೆ ನೀಡಿದ್ದರು. ಅಂತೆಯೇ ಇದೀಗ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಭೂಗರ್ಭಶಾಸ್ತ್ರ, ಪರಿಸರ ವಿಜ್ಞಾನ, ಸಾಮಾಜಿಕ ವಿಜ್ಞಾನಗಳ ವಿದ್ಯಾರ್ಥಿಗಳಿಗೆ ಇದೊಂದು  ಬಯಲು ಪ್ರಯೋಗಾಲಯವಾಗಿ ನೂರಾರು ಸಂಶೋಧನೆಗಳು ನಡೆಯುತ್ತಿವೆ. ಇಂತಹ ತಾಣವನ್ನು ಧ್ವಂಸ ಮಾಡಬಾರದು. ಮುಂದಿನ ಪೀಳಿಗೆಗೆ ಉಳಿಸಬೇಕು, ಬೆಳೆಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT