ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಗೆ ಪೆಟ್ರೋಲ್ ಬಂಕ್ ಮಾಲೀಕರ ಅಡ್ಡಗಾಲು; ಭೂಸ್ವಾಧೀನಕ್ಕೆ ಅಡ್ಡಿ!

ಬಹು ನಿರೀಕ್ಷಿತ 117.3 ಕಿಮೀ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ,100 ಕಿಮೀ ವೇಗದಲ್ಲಿ ವಾಹನಗಳು ಚಲಿಸಲು ಅನುಕೂಲವಾಗುವ ಕಾಮಗಾರಿ ಇದಾಗಿದೆ. 

ಬೆಂಗಳೂರು: ಬಹು ನಿರೀಕ್ಷಿತ 117.3 ಕಿಮೀ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ,100 ಕಿಮೀ ವೇಗದಲ್ಲಿ ವಾಹನಗಳು ಚಲಿಸಲು ಅನುಕೂಲವಾಗುವ ಕಾಮಗಾರಿ ಇದಾಗಿದೆ. 

ಎಕ್ಸ್ ಪ್ರೆಸ್ ಹೆದ್ದಾರಿ ಕಾಮಗಾರಿಗಗಾಗಿ ಭೂ ಸ್ವಾದೀನ ಮತ್ತು ಮಾರ್ಗದಲ್ಲಿ ಟೋಲ್ ಪ್ಲಾಜಾ ನಿರ್ಮಿಸಲು ಅಡ್ಡಿ ಎದುರಾಗಿದೆ, 

ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನ ಪೆಟ್ರೋಲ್ ಬಂಕ್ ನ ಡೀಲರ್ ಮತ್ತು ಎಜೆನ್ಸಿಗಳು ಜಾಗ ಬಿಟ್ಟು ಕೊಡಲು ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸದ್ಯ ಇರುವ ಚತುಷ್ಪಥ ಹೆದ್ದಾರಿಯಲ್ಲಿ ಎರಡು ಸರ್ವೀಸ್ ಲೇನ್ ಸೇರಿದಂತೆ ಒಟ್ಟು 10 ಲೇನ್ ರಸ್ತೆಗಳನ್ನಾಗಿ ಮಾರ್ಪಡಿಸಲು ಇಂಟೆಂಡ್ ನೀಡಲಾಗಿದೆ. 

ಕೊರೋನಾ ರೋಗದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸದ್ಯ ಯೋಜನೆಯ ಅವಧಿಯನ್ನು ವಿಸ್ತರಿಸಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊದಲ ಹಂತದ ಕಾಮಗಾರಿಯನ್ನು ನವೆಂಬರ್ 2021 ರಿಂದ ಫೆಬ್ರವರಿ 2022ರ ವರೆಗೆ ಪೂರ್ಣಗೊಳಿಸಲು ಸಮಯ ನಿಗದಿ ಮಾಡಿತ್ತು, ಸದ್ಯ ಸೆಪ್ಟಂಬರ್ 22 ರವರೆಗೆ ಅವಧಿ ವಿಸ್ತರಿಸಿದೆ.

ಸುಮಾರು 8 ಸಾವಿರ ಕೋಟಿ  ರು ವೆಚ್ಚದ ಕಾಮಗಾರಿ ಭೂ ಸ್ವಾಧೀನ ಪ್ರಕ್ರಿಯೆ ಹಿನ್ನೆಲೆಯಲ್ಲಿ ವಿಳಂಬವಾಗುತ್ತಿದೆ.

ಪೆಟ್ರೋಲ್ ಪಂಪ್ ಔಟ್‌ಲೆಟ್‌ಗಳಿಗೆ ಸಂಬಂಧಿಸಿದ ವಿಷಯವು ನಿರ್ಣಾಯಕವಾಗಿದೆ. ಏಕೆಂದರೆ ಅವುಗಳು ಎರಡು ಪ್ಲಾಜಾಗಳ ಮುಂದೆ ಇರುವುದರಿಂದ ಹೆದ್ದಾರಿ ಕಾರ್ಯಾಚರಣೆ
ಪ್ರಾರಂಭಿಸಿದಾಗ ಅಲ್ಲಿ  ಆದಾಯವನ್ನು ಸಂಗ್ರಹಿಸುವ ಟೋಲ್ ಪ್ಲಾಜಾ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಒಂದು ಪೆಟ್ರೋಲ್ ಬಂಕ್ ಕಣಿಮಿಣಿಕೆ ಮತ್ತೊಂದು ಮಂಡ್ಯದಲ್ಲಿದೆ, ಎರಡು ಬಂಕ್ ಗಳನ್ನು ಬೇರೆಡೆ ವರ್ಗಾಯಿಸಿ 50 ಕೋಟಿ ರು ಪರಿಹಾರ ಘೋಷಿಸಿದ್ದರೂ ಪೆಟ್ರೋಲ್ ಬಂಕ್ ಅದನ್ನು ನಿರಾಕರಿಸಿದೆ, ಹಾಗಾಗಿ ಕೆಲಸ ಆರಂಭಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಒಂದು ಅಥವಾ ಎರು ತಿಂಗಳಲ್ಲಿ ಅವರನ್ನು ಖಾಲಿ ಮಾಡಿಸುವ ಭರವಸೆ ಇದೆ ಎಂದು ಹೇಳಿದ್ದಾರೆ.

ಪ್ರವೇಶ ಮತ್ತು ಮುಕ್ತಾಯ ಪಾಯಿಂಟ್ ಗಳು ಬೈಪಾಸ್ ನಲ್ಲಿದ್ದು, ಬಿಡದಿ, ರಾಮನಗರ, ಚನ್ನಪಟ್ಟಣ,ಮದ್ದೂರು, ಮಂಡ್ಯಗಳಲ್ಲಿ ನಿರ್ಮಾಣವಾದರೇ ಉತ್ತಮವಾಗಿರುತ್ತದೆ, ರಾಮನಗರದಿಂದ ಎಕ್ಸ್ ಪ್ರೆಸ್ ಹೆದ್ದಾರಿಗೆ ತಲುಪಲು 7 ಕಿಮೀ ಆಗುತ್ತದೆ.  ಮೊದಲ ಹಂತದಲ್ಲಿ ಶೇ.52.5 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT