ಹಂಪಿಯ ವಿರೂಪಾಕ್ಷ ದೇವಾಲಾಯದಲ್ಲಿರುವ ಪ್ರವಾಸಿಗರು 
ರಾಜ್ಯ

ಹಂಪಿಯಲ್ಲಿನ ಪ್ರವಾಸಿ ಗೈಡ್'ಗಳಿಗೆ ಶೀಘ್ರದಲ್ಲೇ ಸಮವಸ್ತ್ರ, ಐಡಿ ಕಾರ್ಡ್ ವಿತರಣೆ!

ಬಳ್ಳಾರಿಯ ಹಂಪಿಯಲ್ಲಿ ನಕರಿ ಪ್ರವಾಸಿ ಗೈಡ್ ಗಳ ಹಾವಳಿಯನ್ನು ತಪ್ಪಿಸುವ ಸಲುವಾಗಿ ಜಿಲ್ಲಾಡಳಿತ ಮಂಡಳಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಶೀಘ್ರದಲ್ಲೇ  ಪ್ರವಾಸಿ ಗೈಡ್(ಮಾರ್ಗದರ್ಶಿ)ಗಳಿಗೆ ಸಮವಸ್ತ್ರ ಹಾಗೂ ಗುರುತಿನ ಚೀಟಿಗಳನ್ನು ನೀಡಲು ಮುಂದಾಗಿದೆ. 

ಬಳ್ಳಾರಿ: ಬಳ್ಳಾರಿಯ ಹಂಪಿಯಲ್ಲಿ ನಕರಿ ಪ್ರವಾಸಿ ಗೈಡ್ ಗಳ ಹಾವಳಿಯನ್ನು ತಪ್ಪಿಸುವ ಸಲುವಾಗಿ ಜಿಲ್ಲಾಡಳಿತ ಮಂಡಳಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಶೀಘ್ರದಲ್ಲೇ  ಪ್ರವಾಸಿ ಗೈಡ್(ಮಾರ್ಗದರ್ಶಿ)ಗಳಿಗೆ ಸಮವಸ್ತ್ರ ಹಾಗೂ ಗುರುತಿನ ಚೀಟಿಗಳನ್ನು ನೀಡಲು ಮುಂದಾಗಿದೆ. 

ಕೆಲ ದಿನಗಳ ಹಿಂದಷ್ಟೇ ಪ್ರವಾಸಿ ಮಾರ್ಗದರ್ಶಿಗಳೊಂದಿಗೆ ಅಧಿಕಾರಿಗಳು ಸಬೆ ನ ಡೆಸಿ ಮಾತುಕತೆ ನಡೆಸಿದ್ದು, ಸಭೆ ವೇಳೆ ಹಲವು ಪ್ರವಾಸಿ ಮಾರ್ಗದರ್ಶಿಗಳು ನಕಲಿ ಮಾರ್ಗದರ್ಶಿಗಳ ಹಾವಳಿ ಹೆಚ್ಚಾಗಿರುವುದರಿಂದ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದರು. 

ಇದರಂತೆ ಕ್ರಮಗಳನ್ನು ಕೈಗೊಂಡಿರುವ ಜಿಲ್ಲಾಡಳಿತ ಮಂಡಳಿಯು, ಪ್ರವಾಸಿ ಮಾರ್ಗದರ್ಶಿಗಳಿಗೆ ತರಬೇತಿ ನೀಡುವುದು, ಸಮವಸ್ತ್ರಗಳನ್ನು ನೀಡುವುದು ಹಾಗೂ ಐಡಿ ಕಾರ್ಡ್ (ಗುರುತಿನ ಚೀಟಿ)ಗಳನ್ನು ನೀಡಲು ಮುಂದಾಗಿದ್ದಾರೆ. 

ದಿನಗಳು ಕಳೆದಂತೆ ಹಂಪಿಗೆ ಬರುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಪ್ರತೀನಿತ್ಯ 2,000 ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. 

ಪ್ರವಾಸಿ ಮಾರ್ಗದರ್ಶಿಗಳಿಗೆ ಐಡಿ ಕಾರ್ಡ್, ತರಬೇತಿ ನೀಡುವುದು ಹಾಗೂ ಸಮವಸ್ತ್ರಗಳನ್ನು ನೀಡುವ ಯೋಜನೆಗೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುತ್ತದೆ. ತಾಂತ್ರಿಕ ಕಾರ್ಯಗಳು ಪೂರ್ಣಗೊಂಡ ನಂತರ ಪ್ರವಾಸಿ ಮಾರ್ಗದರ್ಶಿಗಳಿಗೆ ಸಮವಸ್ತ್ರವನ್ನು ನೀಡಲಾಗುತ್ತದೆ ಎಂದು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರದ (ಎಚ್‌ಡಬ್ಲ್ಯುಎಚ್‌ಎಎಂಎ) ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಸಮವಸ್ತ್ರ, ಐಡಿ ಕಾರ್ಡ್ ಅಷ್ಟೇ ಅಲ್ಲದೆ, ಪುಸ್ತಕಗಳನ್ನು ಪ್ರವಾಸಿ ಮಾರ್ಗದರ್ಶಿಗಳಿಗೆ ನೀಡಲಾಗುತ್ತದೆ. ಹಂಪಿಗೆ ಪ್ರವಾಸಿಗರನ್ನು ಕರೆದೊಯ್ಯುವ ವೇಳೆ ಹಂಪಿ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನೀಡಲು ಈ ಪುಸ್ತಕ ಗೈಡ್'ಗಳಿಗೆ ಸಹಾಯ ಮಾಡುತ್ತವೆ. ಕೇವಲ ಹಂಪಿಯಷ್ಟೇ ಅಲ್ಲದೆ, ರಾಜ್ಯದ ಇತರೆ ಪ್ರವಾಸಿ ತಾಣಗಳಲ್ಲಿರುವ ಗೈಡ್ ಗಳಿಗೂ ಸಮವಸ್ತ್ರ ವಿತರಿಸುವ ಕುರಿತು ಚಿಂತನೆಗಳು ನಡೆಯುತ್ತಿವೆ. ಇದರಿಂದ ನಕಲಿ ಗೈಡ್ ಗಳ ಹಾವಳಿಯನ್ನು ತಪ್ಪಿಸಬಹುದಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT