ಸಾಂದರ್ಭಿಕ ಚಿತ್ರ 
ರಾಜ್ಯ

ಕಿಯೋಸ್ಕ್ ನಿಂದ 2.94 ಲಕ್ಷ ರೂ. ನಾಪತ್ತೆ: ಬೆಂಗಳೂರು ಜಲಮಂಡಳಿಯ ಕ್ಯಾಷಿಯರ್ ಅಮಾನತು

ಅಪರೂಪದ ನಿದರ್ಶನವೊಂದರಲ್ಲಿ, ಸಾರ್ವಜನಿಕರು ಕಟ್ಟಿದ್ದ  2 ಲಕ್ಷ 94 ಸಾವಿರ ರೂಪಾಯಿ ಕಿಯೋಸ್ಕ್ ನಿಂದ ನಾಪತ್ತೆಯಾದ ಬಳಿಕ ಬನಶಂಕರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್ ನನ್ನು  ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ)  ಅಮಾನತು ಮಾಡಿದೆ.

ಬೆಂಗಳೂರು: ಅಪರೂಪದ ನಿದರ್ಶನವೊಂದರಲ್ಲಿ, ಸಾರ್ವಜನಿಕರು ಕಟ್ಟಿದ್ದ 2 ಲಕ್ಷ 94 ಸಾವಿರ ರೂಪಾಯಿ ಕಿಯೋಸ್ಕ್ ನಿಂದ ನಾಪತ್ತೆಯಾದ ಬಳಿಕ ಬನಶಂಕರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್ ನನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ)  ಅಮಾನತು ಮಾಡಿದೆ.

ಈ ಸಂಬಂಧ ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಕೂಡಾ ದಾಖಲಾಗಿದೆ. ಕ್ಯಾಷಿಯರ್ ಲಕ್ಷ್ಮೀ ಪುತ್ರ ನಿಂಗಪ್ಪ ನನ್ನು ಕಳೆದ ವರ್ಷವಷ್ಟೇ ಬನಶಂಕರಿಯ ಬನಗಿರಿ ಕಚೇರಿಗೆ ನಿಯೋಜಿಸಲಾಗಿತ್ತು.

ಸೆಪ್ಟೆಂಬರ್ 28 ರಂದು ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನೀರಿನ ಬಿಲ್ ಮತ್ತು ನಗದನ್ನು ಲೆಕ್ಕ ಹಾಕುವಾಗ 2 ಲಕ್ಷದ 94 ಸಾವಿರದ 60 ರೂಪಾಯಿ ನಾಪತ್ತೆಯಾಗಿರುವುದು ಕಂಡುಬಂದಿತ್ತು ಎಂದು ಬಿಡಬ್ಲ್ಯೂಎಸ್ ಎಸ್ ಬಿ ಮುಖ್ಯಸ್ಥ ಎನ್. ಜಯರಾಮ್ ಹೇಳಿದ್ದಾರೆ.

ಕ್ಯಾಷಿಯರ್ ಶಂಕಿತ ಚಟುವಟಿಕೆಗಳ ಬಗ್ಗೆ ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾನೆ. ಆತನ ಮನೆಯಲ್ಲಿ ವಿಚಾರಣೆ ನಡೆಸಿದ್ದೇವೆ. ಕಿಯೋಸ್ಕ್ ನಲ್ಲಿನ ಹಣದ ಬಗ್ಗೆ ಸಿಬ್ಬಂದಿಯೇ ಸಂಪೂರ್ಣ ಹೊಣೆಯಾಗಿರುತ್ತಾರೆ. ಈ ಸಂಬಂಧ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಾದ್ಯಂತ ಬಿಡಬ್ಲ್ಯೂಎಸ್ ಎಸ್ ಬಿಯ 74 ಕಿಯೋಸ್ಕ್ ಗಳಿವೆ. ಕಚೇರಿ ಅವಧಿ ಮುಗಿದರೂ ಇದರ ಮೂಲಕ ಸಾರ್ವಜನಿಕರು ಶುಲ್ಕವನ್ನು ಕಟ್ಟಬಹುದಾಗಿದೆ. ಕಿಯೋಸ್ಕ್ ನಿಂದ ಹಣ ನಾಪತ್ತೆಯಾಗಿರುವುದು ಅಪರೂಪವಾಗಿದೆ ಎಂದು ಮತ್ತೋರ್ವ ಹಿರಿಯ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT