ಸಾಂದರ್ಭಿಕ ಚಿತ್ರ 
ರಾಜ್ಯ

ಕಿಯೋಸ್ಕ್ ನಿಂದ 2.94 ಲಕ್ಷ ರೂ. ನಾಪತ್ತೆ: ಬೆಂಗಳೂರು ಜಲಮಂಡಳಿಯ ಕ್ಯಾಷಿಯರ್ ಅಮಾನತು

ಅಪರೂಪದ ನಿದರ್ಶನವೊಂದರಲ್ಲಿ, ಸಾರ್ವಜನಿಕರು ಕಟ್ಟಿದ್ದ  2 ಲಕ್ಷ 94 ಸಾವಿರ ರೂಪಾಯಿ ಕಿಯೋಸ್ಕ್ ನಿಂದ ನಾಪತ್ತೆಯಾದ ಬಳಿಕ ಬನಶಂಕರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್ ನನ್ನು  ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ)  ಅಮಾನತು ಮಾಡಿದೆ.

ಬೆಂಗಳೂರು: ಅಪರೂಪದ ನಿದರ್ಶನವೊಂದರಲ್ಲಿ, ಸಾರ್ವಜನಿಕರು ಕಟ್ಟಿದ್ದ 2 ಲಕ್ಷ 94 ಸಾವಿರ ರೂಪಾಯಿ ಕಿಯೋಸ್ಕ್ ನಿಂದ ನಾಪತ್ತೆಯಾದ ಬಳಿಕ ಬನಶಂಕರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಕ್ಯಾಷಿಯರ್ ನನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ಎಸ್ ಬಿ)  ಅಮಾನತು ಮಾಡಿದೆ.

ಈ ಸಂಬಂಧ ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಕೂಡಾ ದಾಖಲಾಗಿದೆ. ಕ್ಯಾಷಿಯರ್ ಲಕ್ಷ್ಮೀ ಪುತ್ರ ನಿಂಗಪ್ಪ ನನ್ನು ಕಳೆದ ವರ್ಷವಷ್ಟೇ ಬನಶಂಕರಿಯ ಬನಗಿರಿ ಕಚೇರಿಗೆ ನಿಯೋಜಿಸಲಾಗಿತ್ತು.

ಸೆಪ್ಟೆಂಬರ್ 28 ರಂದು ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ನೀರಿನ ಬಿಲ್ ಮತ್ತು ನಗದನ್ನು ಲೆಕ್ಕ ಹಾಕುವಾಗ 2 ಲಕ್ಷದ 94 ಸಾವಿರದ 60 ರೂಪಾಯಿ ನಾಪತ್ತೆಯಾಗಿರುವುದು ಕಂಡುಬಂದಿತ್ತು ಎಂದು ಬಿಡಬ್ಲ್ಯೂಎಸ್ ಎಸ್ ಬಿ ಮುಖ್ಯಸ್ಥ ಎನ್. ಜಯರಾಮ್ ಹೇಳಿದ್ದಾರೆ.

ಕ್ಯಾಷಿಯರ್ ಶಂಕಿತ ಚಟುವಟಿಕೆಗಳ ಬಗ್ಗೆ ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾನೆ. ಆತನ ಮನೆಯಲ್ಲಿ ವಿಚಾರಣೆ ನಡೆಸಿದ್ದೇವೆ. ಕಿಯೋಸ್ಕ್ ನಲ್ಲಿನ ಹಣದ ಬಗ್ಗೆ ಸಿಬ್ಬಂದಿಯೇ ಸಂಪೂರ್ಣ ಹೊಣೆಯಾಗಿರುತ್ತಾರೆ. ಈ ಸಂಬಂಧ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನಾದ್ಯಂತ ಬಿಡಬ್ಲ್ಯೂಎಸ್ ಎಸ್ ಬಿಯ 74 ಕಿಯೋಸ್ಕ್ ಗಳಿವೆ. ಕಚೇರಿ ಅವಧಿ ಮುಗಿದರೂ ಇದರ ಮೂಲಕ ಸಾರ್ವಜನಿಕರು ಶುಲ್ಕವನ್ನು ಕಟ್ಟಬಹುದಾಗಿದೆ. ಕಿಯೋಸ್ಕ್ ನಿಂದ ಹಣ ನಾಪತ್ತೆಯಾಗಿರುವುದು ಅಪರೂಪವಾಗಿದೆ ಎಂದು ಮತ್ತೋರ್ವ ಹಿರಿಯ ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?