ರವಿ ಪೂಜಾರಿ 
ರಾಜ್ಯ

ಅಕ್ರಮ ಹಣ ವರ್ಗಾವಣೆ: ರವಿ ಪೂಜಾರಿ ವಿಚಾರಣೆಗೆ ಇ.ಡಿ. ಸಿದ್ದತೆ

ಅಕ್ರಮ ಹಣ ಭಾರತದಿಂದ ಹೊರದೇಶಗಳಿಗೆ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮುಂದಾಗಿದ್ದಾರೆ.

ಬೆಂಗಳೂರು: ಅಕ್ರಮ ಹಣ ಭಾರತದಿಂದ ಹೊರದೇಶಗಳಿಗೆ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಮುಂದಾಗಿದ್ದಾರೆ.

ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಈತ ಹಿಂದೆ ಕ್ರಿಕೆಟ್ ಬೆಟ್ಟಿಂಗ್ ದಂಧೆ, ರಾಜಕೀಯ, ಸಿನಿಮಾ ಕ್ಷೇತ್ರದ ವ್ಯಕ್ತಿಗಳಿಗೆ ಪ್ರಾಣ ಬೆದರಿಕೆ ಹಾಕಿ ಅಕ್ರಮವಾಗಿ ಹಣ ಗಳಿಸಿ ಭಾರತದಿಂದ ಹೊರದೇಶಗಳಿಗೆ ಹಣ ರವಾನಿಸಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಈತನ ವಿಚಾರಣಗೆ ಜಾರಿ ನಿರ್ದೇಶನಾಲಯ ಮುಂದಾಗಿದೆ.

ಕಳೆದ ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದ ಸೆನಗಲ್ ನಲ್ಲಿ ಪೂಜಾರಿಯನ್ನು ಬಂಧಿಸಿ ಭಾರತಕ್ಕೆ ಕರೆತರಲಾಗಿತ್ತು.  ರವಿ ಪೂಜಾರಿ ವಿರುದ್ಧ ಬೆಂಗಳೂರಿನಲ್ಲಿ 39, ಮಂಗಳೂರಿನಲ್ಲಿ 36 ಸೇರಿ  93ಕ್ಕೂ ಹೆಚ್ಚು ಪ್ರಕರಣಗಳಿದೆ.

ಕಳೆದ ಜನವರಿಯಲ್ಲಿ ರವಿ ಪೂಜಾರಿ ಆಪ್ತ ಗುಲಾಂ ಎಂಬಾತನನ್ನು ಬಂಧಿಸಿ 10 ದಿನಗಳ ಕಾಲ ವಿಚಾರಣೆ ನಡಿಸಿದಾಗ ಸಿಸಿಬಿ ಅಧಿಕಾರಿಗಳ ಎದುರು ರವಿ ಪೂಜಾರಿ ಅಕ್ರಮ ಹಣದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದ ಎನ್ನಲಾಗ್ತಿದೆ. ಸದ್ಯ ಇದರ ಆಧಾರದ ಮೇರೆಗೆ ಪರಪ್ಪನ ಅಗ್ರಹಾರಕ್ಕೆ ತೆರಳಿ ಪೂಜಾರಿಯ ವಿಚಾರಣೆಯನ್ನ ಇಡಿ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT