ಸಾಂದರ್ಭಿಕ ಚಿತ್ರ 
ರಾಜ್ಯ

ಗುಂಡಿನ ದಾಳಿ: ಬಿಜೆಪಿ ಮುಖಂಡ ಕಳಗಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಾವು 

ಬಿಜೆಪಿ ನಾಯಕ ಬಾಲಚಂದ್ರ ಕಳಗಿ ಅವರ ಕೊಲೆ ಪ್ರಕರಣದ ಮುಖ್ಯ ಆರೋಪಿಯು ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹತನಾಗಿದ್ದಾನೆ.

ಮಂಗಳೂರು: ಬಿಜೆಪಿ ನಾಯಕ ಬಾಲಚಂದ್ರ ಕಳಗಿ ಅವರ ಕೊಲೆ ಪ್ರಕರಣದ ಮುಖ್ಯ ಆರೋಪಿಯು ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಹತನಾಗಿದ್ದಾನೆ.

ಗುಂಡಿನ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಆರೋಪಿ ಸಂಪತ್ ಮೃತಪಟ್ಟಿರುವುದಾಗಿ ಸುಲಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಘೋಷಿಸಿದ್ದಾರೆ.

ಬೆಳಿಗ್ಗೆ ಶಾಂತಿನಗರದಲ್ಲಿರುವ ತನ್ನ ಮನೆಯಿಂದ ಹೊರಬಂದಾಗ ಸಂಪತ್‌ ಮೇಲೆ ಗುಂಡಿನ ದಾಳಿಯಾಗಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿ ಪ್ರಸಾದ್ ತಿಳಿಸಿದ್ದಾರೆ.ಗುಂಡು ಹಾರಿಸಿದ ಬಳಿಕ ಹಲ್ಲೆಕೋರರು ವಾಹನದಲ್ಲಿ ವೇಗವಾಗಿ ಪರಾರಿಯಾಗಿದ್ದಾರೆ.

ಗುಂಡಿನ ದಾಳಿಯ ಜತೆಗೆ ಮಚ್ಚು ಮೊದಲಾದ ಆಯುಧಗಳಿಂದಲೂ ಸಂಪತ್ ತಲೆಬುರುಡೆಯ ಮೇಲೆ ಬಲವಾಗಿ ಹೊಡೆಯಲಾಗಿದೆ. ಹಲ್ಲೆಕೋರರು ಆತನಿಗೆ ಪರಿಚಿತರೇ ಆಗಿರಬಹುದು ಎಂಬುದು ನಮ್ಮ ಆರಂಭಿಕ ತನಿಖೆಯ ಆಧಾರದ ಮೇಲೆ ತಿಳಿದುಬಂದಿರುವುದಾಗಿ ಅಧಿಕಾರಿ ಹೇಳಿದ್ದಾರೆ.

ಒಂದು ವರ್ಷದ ಹಿಂದೆ ಬಿಜೆಪಿ ನಾಯಕ ಬಾಲಚಂದ್ರ ಕಳಗಿಯನ್ನು ಕೊಲೆ ಮಾಡಿದ್ದ ಆರೋಪ ಸಂಪತ್ ಮೇಲಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT