ಯಡಿಯೂರಪ್ಪ 
ರಾಜ್ಯ

ಮುಖ್ಯಮಂತ್ರಿಗಳನ್ನು ಭೇಟಿಯಾಗಬೇಕೆ? ಕೊರೋನಾ ಟೆಸ್ಟ್ ಕಡ್ಡಾಯ!

ಸಿಎಂ ಯಡಿಯೂರಪ್ಪ ಸೇರಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕೃಷ್ಣಾಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಕೊರೋನಾ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಬೆಂಗಳೂರು: ಸಿಎಂ ಯಡಿಯೂರಪ್ಪ ಸೇರಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕೃಷ್ಣಾಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಕೊರೋನಾ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯ ಮಾಡಲಾಗಿದೆ. 

ಮುಖ್ಯಮಂತ್ರಿಗಳನ್ನು ಭೇಟಿಯಾಗುವ ಸಲುವಾಗಿ ಕಚೇರಿ ಬಳಿ ಬರುವ ಪ್ರತೀಯೊಬ್ಬರಿಗೂ ಇದೀಗ ಕೊರೋನಾ ಪರಿಕ್ಷೆಯನ್ನು ಕಡ್ಡಾಯವಾಗಿ ಮಾಡಲಾಗುತ್ತಿದ್ದು, ವೈದ್ಯಕೀಯ ವರದಿಯಲ್ಲಿ ಸೋಂಕು ಇಲ್ಲ ಎಂದು ದೃಢಪಟ್ಟರೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. 

ಇತ್ತೀಚೆಗಷ್ಟೇ ಪರೀಕ್ಷೆ ಮಾಡಿಸಿಕೊಂಡು ವರದಿ ನೆಗೆಟಿವ್ ಇದ್ದರೆ ಅಂತಹವರಿಗೆ ಮತ್ತೆ ಪರೀಕ್ಷೆ ಮಾಡಲಾಗುತ್ತಿಲ್ಲ. ಆದರೆ, ವರದಿಯನ್ನು ಕಡ್ಡಾಯವಾಗಿ ಸಾರ್ವಜನಿಕರ ಬಳಿ ಇಟ್ಟುಕೊಂಡಿರಬೇಕಾಗುತ್ತದೆ. ವರದಿ ಹಿಡಿದು ಬಾರದ ಜನರಿಗೆ ಕೃಷ್ಣಾದಲ್ಲಿಯೇ ಆ್ಯಂಟಿಜನ್ ಪರೀಕ್ಷೆ ನಡೆಸಿ 15 ನಿಮಿಷಗಲ್ಲಿ ವೈದ್ಯಕೀಯ ವರದಿಯನ್ನು ನೀಡಲಾಗುತ್ತಿದೆ. 

ಮೂಗು ಮತ್ತು ಗಂಟಲಿನಿಂದ ಸ್ಯಾಂಪಲ್ಸ್ ಸಂಗ್ರಹಿಸಿದ ಬಳಿಕ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಬಳಿಕ 15 ನಿಮಿಷಗಳಲ್ಲಿ ವರದಿ ನೀಡಿ ವರದಿಯಲ್ಲಿಯಲ್ಲಿ ನೆಗೆಟಿವ್ ಇದ್ದರೆ ಮಾತ್ರ ಮುಖ್ಯಮಂತ್ರಿಗಳ ಕಚೇರಿಗೆ ತೆರಳಲು ಅನುಮತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಕಚೇರಿಗೆ ಭೇಟಿ ನೀಡಿ ಬಂದ ವ್ಯಕ್ತಿಯೊಬ್ಬರು ಹೇಳಿದ್ದಾರೆ. 

ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೈದ್ ಅಖ್ತರ್ ಅವರು ಮಾತನಾಡಿ, ಸಿಎಂ ಕಚೇರಿಗೆ ಬರುವ ಪ್ರತೀಯೊಬ್ಬರಿಗೂ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ. ವರದಿ ನೆಗೆಟಿವ್ ಇದ್ದರೆ ಮಾತ್ರ ಕಚೇರಿಯೊಳಗೆ ಪ್ರವೇಶಿಸಲು ಅನುಮತಿ ನೀಡಲಾಗುತ್ತದೆ. ಪ್ರತೀಯೊಬ್ಬರನ್ನು ಸುರಕ್ಷಿತದಿಂದ ಇರುವಂತೆ ನೋಡಿಕೊಳ್ಳುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. 

ಈ ಕ್ರಮವನ್ನು ಮೊದಲೇ ಕೈಗೊಳ್ಳಬೇಕಿತ್ತು: ಬಿಎಸ್'ವೈ ಆಪ್ತರು
ಆರೋಗ್ಯ ಇಲಾಖೆ ಈ ಕ್ರಮಗಳ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿಗಳ ಸಲಹೆಗಾರರು, ಆಪ್ತರು ಹಾಗೂ ಇತರೆ ಅಧಿಕಾರಿಗಳು ಈ ಮೊದಲೇ ಇಲಾಖೆ ಈ ಕ್ರಮಗಳನ್ನು ಕೈಗೊಂಡಿದ್ದರೆ, ಉತ್ತಮವಾಗಿರುತ್ತಿತ್ತು ಎಂದು ಹೇಳಿದ್ದಾರೆ. 

ಆರೋಗ್ಯ ಇಲಾಖೆಯ ಈ ಕ್ರಮ ಸ್ವಾಗತಾರ್ಹ. ಆದರೆ, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ ಎಂದು ತಿಳಿಸಿದ್ದಾರೆ. 

ಈ ನಡುವೆ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿ, ಗೃಹ ಕಚೇರಿ ಕೃಷ್ಣಾಗೆ ಪ್ರತೀನಿತ್ಯ 200-300 ಜನರು ಆಗಮಿಸುತ್ತಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾಗಿರುವ ಕಾವೇರಿಗೆ 100 ಜನರಾದರೂ ಬರುತ್ತಿರುತ್ತಾರೆಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT