ರಾಮ್ ವಿಲಾಸ್ ಪಾಸ್ವಾನ್ 
ರಾಜ್ಯ

ಕೇಂದ್ರ ಸಚಿವ ಪಾಸ್ವಾನ್ ನಿಧನ: ಬೆಂಗಳೂರಿನಲ್ಲಿ ಅರ್ಧಮಟ್ಟದಲ್ಲಿ ರಾಷ್ಟ್ರಧ್ವಜ ಹಾರಿಸಿ ಗೌರವ ಸಲ್ಲಿಕೆ

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಿ ಗೌರವ ಸಲ್ಲಿಸಲಾಗಿದೆ.

ಬೆಂಗಳೂರು: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಿ ಗೌರವ ಸಲ್ಲಿಸಲಾಗಿದೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಕ್ಟೋಬರ್ 9ರಂದು ಶುಕ್ರವಾರ ರಾಜಧಾನಿ ಬೆಂಗಳೂರಿನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಕೇಂದ್ರ ಆಹಾರ ಸಚಿವ, ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ ಹಾಗೂ ದೇಶದ ಪ್ರಮುಖ ದಲಿತ ನಾಯಕ ರಾಮವಿಲಾಸ್ ಪಾಸ್ವಾನ್ ಅವರು ಗುರುವಾರ ನಿಧನ ಹೊಂದಿದ್ದಾರೆ. ಕಳೆದ ವಾರ ದೆಹಲಿ ಯಖಾಸಗಿ ಆಸ್ಪತ್ರೆಯಲ್ಲಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪಾಸ್ವಾನ್ ಅವರು, ಶೀಘ್ರದಲ್ಲೇ ಇನ್ನೊಂದು ಸರ್ಜರಿಗೆ ಒಳಗಾಗಬೇಕಿತ್ತು. ಆದರೆ, ಬಹು ಅಂಗಾಂಗ ವೈಫಲ್ಯದಿಂದ ನಿನ್ನೆ ಸಂಜೆ ಇಹಲೋಕ ತ್ಯಜಿಸಿದ್ದಾರೆ. 

15 ದಿನಗಳ ಅಂತರದಲ್ಲಿ ನಿಧನರಾದ ಎರಡನೇ ಕೇಂದ್ರ ಸಚಿವ ಪಾಸ್ವಾನ್ ಆಗಿದ್ದಾರೆ. ಸೆ.23ರಂದಷ್ಟೇ ಕರ್ನಾಟಕ ಮೂಲಕ ರೈಲ್ವೈ ಸಚಿವ ಸುರೇಶ್ ಅಂಗಡಿಯವರು ಕೊರೋನಾದಿಂದ ವಿಧಿವಶರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT