ರಾಜ್ಯ

ದಾವಣಗೆರೆ ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆ ಆರಂಭ

Manjula VN

ದಾವಣಗೆರೆ: ಜಿಲ್ಲೆಯ ಮಾಯಕೊಂಡ ಠಾಣೆಯಲ್ಲಿ ನಡದೆ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. 

ತನಿಖೆ ಆರಂಭಿಸಿರುವ ಸಿಐಡಿ ಡಿವೈಎಸ್ಪಿ ಕೆ.ಸಿ.ಗಿರೀಶ್ ನೇತೃತ್ವದ ತಂಡ, ಮಾಯಕೊಂಡ ಪೊಲೀಸ್ ಟಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಠಾಣೆಯಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಇತರೆ ಸಾಕ್ಷ್ಯಗಳನ್ನು ಪರಿಶೀಲನೆ ನಡೆಸಿದೆ. ಇದೇ ವೇಳೆ ಮೃತದೇಹ ಪತ್ತೆಯಾಗಿದ್ದ ಸ್ಥಳವನ್ನೂ ಪರಿಶೀಲನೆ ನಡೆಸಿದ್ದಾರೆ. 

ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಹಾಜರಾಗಿದ್ದ ವಿಠಲಾಪುರ ಗ್ರಾಮದ ಮರಳುಸಿದ್ದಪ್ಪ ಅವರನ್ನು ಲಾಕಪ್ ಡೆತ್ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಪ್ರಕರಣ ಸಂಬಂಧ ಪಿಎಸ್ಐ ಸೇರಿ ನಾಲ್ವರು ಪೊಲೀಸರನ್ನು ಈಗಾಗಲೇ ಅಮಾನತು ಮಾಡಲಾಗಿದೆ. 

SCROLL FOR NEXT