ಸಾಂದರ್ಭಿಕ ಚಿತ್ರ 
ರಾಜ್ಯ

ಮೊದಲು ಕಾಲೇಜು ಪುನಾರಂಭಿಸಿ, ನಂತರ ಶಾಲೆ ತೆರೆಯಿರಿ: ಶಿಕ್ಷಣ ತಜ್ಞರು

ರಾಜ್ಯದಲ್ಲಿ ಹಂತ ಹಂತವಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ. ಆದರೆ ಶಾಲೆಗಳನ್ನು ಯಾವಾಗ ತೆರೆಯಬೇಕು ಎಂಬ ದಿನಾಂಕವನ್ನು ತಿಳಿಸಿಲ್ಲ.

ಬೆಂಗಳೂರು: ರಾಜ್ಯದಲ್ಲಿ ಹಂತ ಹಂತವಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ. ಆದರೆ ಶಾಲೆಗಳನ್ನು ಯಾವಾಗ ತೆರೆಯಬೇಕು ಎಂಬ ದಿನಾಂಕವನ್ನು ತಿಳಿಸಿಲ್ಲ.

ಶಿಕ್ಷಣ ತಜ್ಞ ಪ್ರೊ. ಎಂಆರ್ ದೊರೆಸ್ವಾಮಿ ಮಕ್ಕಳಿಗಿಂತ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿ ಇರುತ್ತದೆ. ಜೊತೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಮತ್ತು ನಿಯಮಗಗಳ ಬಗ್ಗೆ ಅರಿವಿರುತ್ತದೆ ಎಂದು ಹೇಳಿದ್ದಾರೆ.

ಈ ಸಂಬಂಧ ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ಸುರೇಶ್ ಕುಮಾರ್  ಅವರಿಗೆ ಪತ್ರ ಬರೆದಿರುವ ದೊರೆಸ್ವಾಮಿ, ಹಂತಹಂತವಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭಿಸಲು ಸಲಹೆ ನೀಡಿದ್ದಾರೆ. ಅದಾದ ನಂತರ  ಶಾಲಾ ಮಕ್ಕಳಿಗೆ ತರಗತಿ ಆರಂಭಿಸುವಂತೆ ತಿಳಿಸಿದ್ದಾರೆ. ಆದರೆ ಅದು ಕೂಡ ಆರನೇ ತರಗತಿ ಮೇಲ್ಪಟ್ಟ ಮಕ್ಕಳಿಗೆ.ಹಾಸ್ಟೆಲ್ ಸೌಲಭ್ಯಗಳು ಮತ್ತು ಅಂತರರಾಜ್ಯ ಸಾರಿಗೆಯಂತಹ ತೊಂದರೆಗಳನ್ನು ತಪ್ಪಿಸಲು, ಕೇವಸ ಸ್ಥಳೀಯ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆ ತೆರೆಯಲು ಸಲಹೆ ನೀಡಲಾಗಿದೆ.

ಶಾಲಾ ಸಂಸ್ಥೆಗಳು ಪ್ರತ್ಯೇಕ ಬ್ಯಾಚ್ ಗಳನ್ನು ಮಾಡಿ ತರಗತಿ ನಡೆಸುವಂತೆ ತಿಳಿಸಲಾಗಿದೆ. ಜೊತೆಗೆ ದಿನ ಬಿಟ್ಟು ದಿನ ತರಗತಿ ನಡೆಸುವಂತೆ ಸೂಚಿಸಲಾಗಿದೆ.

ಅಕ್ಟೋಬರ್ 15ರ ನಂತರ ಶಾಲೆಗಳ ಪುನಾರಂಭಕ್ಕೆ ಸಂಭಂಧಿಸಿದಂತೆ ಮಾರ್ಗಸೂಚಿ ಹೊರಡಿಸಲಿದೆ. ಜೊತೆಗೆ ಸಾಮಾಜಿಕ ಅಂತರ, ದೈಹಿಕ ಅಂತರ ನಿರ್ವಹಣೆ ಕಡ್ಡಾಯವಾಗಿರುತ್ತದೆ, ತರಗತಿಗಳ ಸಮಯದ ಅವಧಿಯೂ ಕಡಿಮೆ ಮಾಡಬೇಕೆಂದು ತಿಳಿಸಿದೆ.

ದಿನಬಿಟ್ಟು ದಿನ ಶಾಲೆಗೆ ಹಾಜರಾಗುವಂತೆ ಅಥವಾ ವಾರದಲ್ಲಿ ಎರಡು ದಿನ ತರಗತಿ ನಡೆಸಲು ಯೋಜಿಸಬೇಕೆಂದು ಸೂಚಿಸಿದೆ. ದೊಡ್ಡ ದೊಡ್ಡ ಕೊಠಡಿಗಳಲ್ಲಿ ಎರಡು ಬ್ಯಾಚ್ ಮಾಡಿ ಸಮ-ಬೆಸ್ಟ್ ಫಾರ್ಮುಲಾ ಬಳಸಬೇಕೆಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT