ಸಾಂದರ್ಭಿಕ ಚಿತ್ರ 
ರಾಜ್ಯ

ಮೊದಲು ಕಾಲೇಜು ಪುನಾರಂಭಿಸಿ, ನಂತರ ಶಾಲೆ ತೆರೆಯಿರಿ: ಶಿಕ್ಷಣ ತಜ್ಞರು

ರಾಜ್ಯದಲ್ಲಿ ಹಂತ ಹಂತವಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ. ಆದರೆ ಶಾಲೆಗಳನ್ನು ಯಾವಾಗ ತೆರೆಯಬೇಕು ಎಂಬ ದಿನಾಂಕವನ್ನು ತಿಳಿಸಿಲ್ಲ.

ಬೆಂಗಳೂರು: ರಾಜ್ಯದಲ್ಲಿ ಹಂತ ಹಂತವಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಶಿಕ್ಷಣ ತಜ್ಞರು ಸಲಹೆ ನೀಡಿದ್ದಾರೆ. ಆದರೆ ಶಾಲೆಗಳನ್ನು ಯಾವಾಗ ತೆರೆಯಬೇಕು ಎಂಬ ದಿನಾಂಕವನ್ನು ತಿಳಿಸಿಲ್ಲ.

ಶಿಕ್ಷಣ ತಜ್ಞ ಪ್ರೊ. ಎಂಆರ್ ದೊರೆಸ್ವಾಮಿ ಮಕ್ಕಳಿಗಿಂತ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚು ರೋಗ ನಿರೋಧಕ ಶಕ್ತಿ ಇರುತ್ತದೆ. ಜೊತೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ಮತ್ತು ನಿಯಮಗಗಳ ಬಗ್ಗೆ ಅರಿವಿರುತ್ತದೆ ಎಂದು ಹೇಳಿದ್ದಾರೆ.

ಈ ಸಂಬಂಧ ಡಿಸಿಎಂ ಅಶ್ವತ್ಥ ನಾರಾಯಣ ಮತ್ತು ಸುರೇಶ್ ಕುಮಾರ್  ಅವರಿಗೆ ಪತ್ರ ಬರೆದಿರುವ ದೊರೆಸ್ವಾಮಿ, ಹಂತಹಂತವಾಗಿ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಆರಂಭಿಸಲು ಸಲಹೆ ನೀಡಿದ್ದಾರೆ. ಅದಾದ ನಂತರ  ಶಾಲಾ ಮಕ್ಕಳಿಗೆ ತರಗತಿ ಆರಂಭಿಸುವಂತೆ ತಿಳಿಸಿದ್ದಾರೆ. ಆದರೆ ಅದು ಕೂಡ ಆರನೇ ತರಗತಿ ಮೇಲ್ಪಟ್ಟ ಮಕ್ಕಳಿಗೆ.ಹಾಸ್ಟೆಲ್ ಸೌಲಭ್ಯಗಳು ಮತ್ತು ಅಂತರರಾಜ್ಯ ಸಾರಿಗೆಯಂತಹ ತೊಂದರೆಗಳನ್ನು ತಪ್ಪಿಸಲು, ಕೇವಸ ಸ್ಥಳೀಯ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆ ತೆರೆಯಲು ಸಲಹೆ ನೀಡಲಾಗಿದೆ.

ಶಾಲಾ ಸಂಸ್ಥೆಗಳು ಪ್ರತ್ಯೇಕ ಬ್ಯಾಚ್ ಗಳನ್ನು ಮಾಡಿ ತರಗತಿ ನಡೆಸುವಂತೆ ತಿಳಿಸಲಾಗಿದೆ. ಜೊತೆಗೆ ದಿನ ಬಿಟ್ಟು ದಿನ ತರಗತಿ ನಡೆಸುವಂತೆ ಸೂಚಿಸಲಾಗಿದೆ.

ಅಕ್ಟೋಬರ್ 15ರ ನಂತರ ಶಾಲೆಗಳ ಪುನಾರಂಭಕ್ಕೆ ಸಂಭಂಧಿಸಿದಂತೆ ಮಾರ್ಗಸೂಚಿ ಹೊರಡಿಸಲಿದೆ. ಜೊತೆಗೆ ಸಾಮಾಜಿಕ ಅಂತರ, ದೈಹಿಕ ಅಂತರ ನಿರ್ವಹಣೆ ಕಡ್ಡಾಯವಾಗಿರುತ್ತದೆ, ತರಗತಿಗಳ ಸಮಯದ ಅವಧಿಯೂ ಕಡಿಮೆ ಮಾಡಬೇಕೆಂದು ತಿಳಿಸಿದೆ.

ದಿನಬಿಟ್ಟು ದಿನ ಶಾಲೆಗೆ ಹಾಜರಾಗುವಂತೆ ಅಥವಾ ವಾರದಲ್ಲಿ ಎರಡು ದಿನ ತರಗತಿ ನಡೆಸಲು ಯೋಜಿಸಬೇಕೆಂದು ಸೂಚಿಸಿದೆ. ದೊಡ್ಡ ದೊಡ್ಡ ಕೊಠಡಿಗಳಲ್ಲಿ ಎರಡು ಬ್ಯಾಚ್ ಮಾಡಿ ಸಮ-ಬೆಸ್ಟ್ ಫಾರ್ಮುಲಾ ಬಳಸಬೇಕೆಂದು ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT