ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 
ರಾಜ್ಯ

ತಕ್ಷಣಕ್ಕೆ ಶಾಲೆ ಆರಂಭಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ

ಕೋವಿಡ್ ತೀವ್ರವಾಗಿ ವ್ಯಾಪಿಸುತ್ತಿರುವ ನಡುವೆಯೂ ಶಾಲಾ ಕಾಲೇಜುಗಳನ್ನು ಯಾವುದೇ ಕಾರಣಕ್ಕೂ ತೆರಯುವುದಿಲ್ಲ.ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಕೋವಿಡ್ ತೀವ್ರವಾಗಿ ವ್ಯಾಪಿಸುತ್ತಿರುವ ನಡುವೆಯೂ ಶಾಲಾ ಕಾಲೇಜುಗಳನ್ನು ಯಾವುದೇ ಕಾರಣಕ್ಕೂ ತೆರಯುವುದಿಲ್ಲ.ಈ ಬಗ್ಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಶಾಲೆಗಳನ್ನು ಆರಂಭಿಸುವ ಬಗ್ಗೆ ಪರ ವಿರೋಧ ಚೆರ್ಚೆ ನಡೆಯುತ್ತಿದ್ದು, ಈ ಬಗ್ಗೆ ಮಾಧ್ಯಮಗಳು ಕೂಡಾ ಅಭಿಯಾನ ಆರಂಭಿಸಿರುವುದನ್ನು ಗಮನಿಸಿರುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ.

ರಾಜಕೀಯ ಪಕ್ಷಗಳ ಮುಖಂಡರು ಶಾಲೆ ತೆರೆಯುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಮಕ್ಕಳ ಆರೋಗ್ಯ ದೃಷ್ಟಿಯಿಂದ ಶಾಲೆಗಳನ್ನು ಆರಂಭಿಸುವ ಮುನ್ನ ಎಲ್ಲಾ ಪಕ್ಷಗಳ ಮುಖಂಡರು, ತಜ್ಞರು,ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ ಬಾಧಕಗಳ ಬಗ್ಗೆ ಸಮಗ್ರ ಚೆರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಊಹಾಪೋಹ ಮತ್ತು ವದಂತಿಗಳಿಗೆ ಕಿವಿಗೂಡಬಾರದೆಂದು ಪೋಷಕರಲ್ಲಿ ಮನವಿ ಮಾಡಿರುವ ಮುಖ್ಯಮಂತ್ರಿ, ಈ ಬಗ್ಗೆ ಜಾಗೃತಿ ಮೂಡಿಸುವಂತೆ ಮಾಧ್ಯಮಗಳಲ್ಲಿ ಕೋರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT