ಶಿವಾನಂದ ಬೋಗಾರ 
ರಾಜ್ಯ

ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಸಮಾಧಿಯಲ್ಲೇ ಧರಣಿ ಕುಳಿತ ರೈತ!

ಕಬ್ಬಿನ ಬಾಕಿ ಬಿಲ್ ಪಾವತಿ ಮಾಡುವಂತೆ ಆಗ್ರಹಿಸಿದ ರೈತನೊಬ್ಬ ಶವ ಸಂಸ್ಕಾರಕ್ಕೆ ಅಗೆಯಲಾಗಿದ್ದ ಸಮಾಧಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಕಿತ್ತೂರೂ ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದಿದೆ. 

ಬೆಳಗಾವಿ: ಕಬ್ಬಿನ ಬಾಕಿ ಬಿಲ್ ಪಾವತಿ ಮಾಡುವಂತೆ ಆಗ್ರಹಿಸಿದ ರೈತನೊಬ್ಬ ಶವ ಸಂಸ್ಕಾರಕ್ಕೆ ಅಗೆಯಲಾಗಿದ್ದ ಸಮಾಧಿಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಕಿತ್ತೂರೂ ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಶುಕ್ರವಾರ ನಡೆದಿದೆ. 

ಎಂ.ಕೆ.ಹುಬ್ಬಳ್ಳಿ ಪಟ್ಟಣದ ಶಿವಾನಂದ ಬೋಗಾರ (50) ಎಂಬ ರೈತನೇ ಸಮಾಧಿಯಲ್ಲಿ ಕುಳಿತು ಧರಣಿ ನಡೆಸಿದ ರೈತನಾಗಿದ್ದಾರೆ. ಇವರು ವೃದ್ಧೆಯೊಬ್ಬಳ ಶವ ಸಂಸ್ಕಾರಕ್ಕೆ ಸ್ಮಶಾನದಲ್ಲಿ ಅಗೆಯಲಾಗಿದ್ದ ಸಮಾಧಿಯಲ್ಲಿ ಕುಳಿತು ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿದ್ದಾರೆ. 

ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ 114 ಟನ್ ಕಬ್ಬು ಕಳಿಸಿದ್ದೇನೆ. ಅದಕ್ಕೆ ನನಗೆ ರೂ.85 ಸಾವಿರ ಬಾಕಿ ಬಿಲ್ ಬರಬೇಕು. ಆದರೆ, ವರ್ಷ ಕಳೆದರೂ ಹಣ ಬಂದಿಲ್ಲ. ಹಣಕ್ಕಾಗಿ ಕಾರ್ಖಾನೆಗೆ ಅಲೆದು ಸಾಕಾಗಿದೆ. ಜೀವನ ನಡೆಸುವುದೇ ಕಷ್ಟವಾಗಿದೆ. ಹಾಗಾಗಿ ಸಮಾಧಿಯಲ್ಲಿ ಕುಳಿತಿದ್ದೇನೆ. ಸಾಯುವುದೊಂದೇ ಬಾಕಿ ಇದೆ. ಕಾರ್ಖಾನೆ ಅಧ್ಯಕ್ಷಕರು, ನಿರ್ದೇಶಕರು ಇಲ್ಲಿಗೆ ಬಂದು ನನಗೆ ಮಣ್ಣಾದರು ಹಾಕಿಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಕಾರ್ಖಾನೆ ನಿರ್ದೇಶಕರಾಗಿದ್ದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಅವರ ಹೆಸರನ್ನು ಪ್ರಸ್ತಾಪಿಸಿ ಬಿಲ್ ಕೊಡಿ ಎಂದು ಆಗ್ರಹಿಸಿದ್ದಾನೆ. 

ಅಷ್ಟೇ ಅಲ್ಲ, ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದು ಬಂದು ಇದ್ದ ಕಾರ್ಖಾನೆ ಜಾಗ ಮಾರಿಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಲ ಹೊರೆೇಯಾಗಿದೆ. ಜೀವನ ನಿರ್ವಹಣೆ ಕಷ್ಟವಾಗಿದೆ. ನಮ್ಮ ಹಣಕ್ಕಾಗಿ ಇಷ್ಟು ಕಷ್ಟಪಡಬೇಕಿದೆ. ನಿಮ್ಮ ಸಹವಾಸವೇ ಸಾಕಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT