ಸಾಂದರ್ಭಿಕ ಚಿತ್ರ 
ರಾಜ್ಯ

ಗ್ರಾಮೀಣ ಸರ್ಕಾರಿ ಕಾಲೇಜುಗಳಿಗೆ ಶೀಘ್ರವೇ ಇಂಟರ್ ನೆಟ್ ಸೌಲಭ್ಯ

ಆನ್‌ಲೈನ್ ಶಿಕ್ಷಣವು ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ತಲುಪದ ಕಾರಣ, ಈ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉನ್ನತ ಶಿಕ್ಷಣ ಇಲಾಖೆ ಒಂದೇ ವೇದಿಕೆಯಲ್ಲಿ ಕಲಿಕೆ ನಿರ್ವಹಣಾ ವ್ಯವಸ್ಥೆಯಲ್ಲಿ  ಕಾರ್ಯನಿರ್ವಹಿಸುತ್ತಿದೆ.

ಬೆಂಗಳೂರು: ಆನ್‌ಲೈನ್ ಶಿಕ್ಷಣವು ರಾಜ್ಯದ ಎಲ್ಲ ವಿದ್ಯಾರ್ಥಿಗಳನ್ನು ತಲುಪದ ಕಾರಣ, ಈ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಉನ್ನತ ಶಿಕ್ಷಣ ಇಲಾಖೆ ಒಂದೇ ವೇದಿಕೆಯಲ್ಲಿ ಕಲಿಕೆ ನಿರ್ವಹಣಾ ವ್ಯವಸ್ಥೆಯಲ್ಲಿ  ಕಾರ್ಯನಿರ್ವಹಿಸುತ್ತಿದೆ.

ರಾಜ್ಯದಲ್ಲಿರುವ 430 ಕಾಲೇಜುಗಳಲ್ಲಿ ಕೇವಲ 75 ಮಾತ್ರ ನಗರದಲ್ಲಿವೆ, ಉಳಿದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಗ್ರಾಮೀಣ ಪ್ರದೇಶದಲ್ಲಿವೆ.

ಹೊಸ ವ್ಯವಸ್ಥೆಯು ಪಿಪಿಟಿಗೆ ಹೆಚ್ಚುವರಿಯಾಗಿ, ಸಾಮಾನ್ಯ ತರಗತಿಗಳಿಗೆ ಅಧ್ಯಯನ ಸಾಮಾಗ್ರಿಗಳು ಮತ್ತು ವೀಡಿಯೊಗಳನ್ನು ಹೆಚ್ಚುವರಿಯಾಗಿ ನೀಡಲಿದೆ.  ವಿದ್ಯಾರ್ಥಿಗಳಿಗೆ ವಿವಿಧ ಪ್ರಶ್ನಾವಳಿಗಳ ಆಯ್ಕೆ ನೀಡಿ ನಿಯಮಿತವಾಗಿ ಅವರನ್ನು ಪರಿಶೀಲಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳಿಗೆ ಇಂಟರ್ ನೆಟ್ ಸೌಲಭ್ಯ ಪಡೆಯಲು ಸಾಧ್ಯವಾಗುವಂತೆ ಮಾಡಲು , ಶಿಕ್ಷಣ ಇಲಾಖೆ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ಇಂಟರ್ನೆಟ್ ಸೌಲಭ್ಯ ನೀಡಲು ಮುಂದಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ಲಾಟ್‌ಫಾರ್ಮ್‌ನ ಸಂಪೂರ್ಣ ಕೋರ್ಸ್ ಅನ್ನು ಆಫ್‌ಲೈನ್‌ನಲ್ಲಿ ನಂತರದ ಬಳಕೆಗಾಗಿ ಡೌನ್‌ಲೋಡ್ ಮಾಡಬಹುದು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳಿಗೆ ಸಹಾಯವಾಗಲು ಯುಟ್ಯೂಬ್‌ನಲ್ಲಿ ವಿಡಿಯೋ ಅಪ್‌ಲೋಡ್ ಮಾಡಲು ಮತ್ತು ವಾಟ್ಸಾಪ್ ಮತ್ತು ಟೆಲಿಗ್ರಾಮ್‌ನಂತಹ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಉಪನ್ಯಾಸ ಟಿಪ್ಪಣಿಗಳನ್ನು ಬದಲಿಸಲು ಅಧ್ಯಾಪಕ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಇದರಿಂದ ಸುಮಾರು 85 ರಷ್ಟು  ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಉನ್ನತ ಶಿಕ್ಷಣ
ಇಲಾಖೆ ನಿರ್ದೇಶಕ ಪ್ರದೀಪ್ ತಿಳಿಸಿದ್ದಾರೆ. ಎಲ್ಲಾ ಸರ್ಕಾರಿ ಶಾಲೆಗಳಿಗೆ ಇಂಟರ್ ನೆಟ್ ಅಳವಡಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ಇಲಾಖೆ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT