ವಿದ್ಯಾಗಮ ಯೋಜನೆ 
ರಾಜ್ಯ

ವಿದ್ಯಾಗಮ ವಿರುದ್ಧದ ಲಾಬಿ ಗೆದಿದ್ದೆ- ಹಿರಿಯ ಅಧಿಕಾರಿಗಳು

ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ದೊಡ್ಡ ಲಾಬಿಯಿಂದಾಗಿ ವಿದ್ಯಾಗಮ ಯೋಜನೆಯನ್ನು ರಾಜ್ಯಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು: ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ದೊಡ್ಡ ಲಾಬಿಯಿಂದಾಗಿ ವಿದ್ಯಾಗಮ ಯೋಜನೆಯನ್ನು ರಾಜ್ಯಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೆಲವು ಕಡೆಗಳಲ್ಲಿ ವಿದ್ಯಾಗಮ ಯೋಜನೆ ಸಂಪೂರ್ಣವಾಗಿ ಯಶಸ್ವಿಯಾಗಿತ್ತು. ಆದಾಗ್ಯೂ, ಶಿಕ್ಷಕರ ಕ್ಷೇತ್ರದ ಚುನಾವಣೆ ಹತ್ತಿರುವಂತೆಯೇ ಸರ್ಕಾರಿ ಮತ್ತು ಖಾಸಗಿ ಶಿಕ್ಷಕರ ಲಾಬಿಯಿಂದಾಗಿ ಈ ಕಾರ್ಯಕ್ರಮ ಸ್ಥಗಿತಗೊಂಡಿರುವುದಾಗಿ ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದಿಂದಾಗಿ ಸಂಕಷ್ಟದಲ್ಲಿರುವ ಆರ್ಥಿಕವಾಗಿ ದುರ್ಬಲ ಮಕ್ಕಳಿಗೆ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಿರುವುದು ಒಳ್ಳೆಯದಲ್ಲ, ಸರ್ಕಾರಿ ಶಾಲೆಗಳು ಶಿಕ್ಷಣದ ಜೊತೆಗೆ ಹಾಲು, ಮಧ್ಯಾಹ್ನ ಊಟ, ಆರೋಗ್ಯ ತಪಾಸಣೆ ಮತ್ತಿತರ ಸೌಲಭ್ಯ ಒದಗಿಸಬೇಕು, ಈ ಕಾರ್ಯಕ್ರಮವನ್ನು ಮತ್ತೆ ಆರಂಭಿಸಬೇಕೆಂದು ಮುಖ್ಯಮಂತ್ರಿಯನ್ನು ಶಿಕ್ಷಣ ತಜ್ಞ ಡಾ. ನಿರಂಜನಾರಾದ್ಯ ಒತ್ತಾಯಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಎಸ್ ಸಿ, ಎಸ್ ಟಿ ಮತ್ತು ಒಬಿಸಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಇರುತ್ತಾರೆ. ಅಂತಹ ಶಿಕ್ಷಣ ನಿರಾಕರಿಸುವ ಮೂಲಕ ಮತ್ತೆ ಜಾತಿ ಆಧಾರಿತ ಕೆಲಸಗಳನ್ನು ಕಳುಹಿಸುವ ಹುನ್ನಾರ ಸರ್ಕಾರದ ನಿರ್ಧಾರವಾಗಿದೆ ಎಂದು ಸಾಮಾಜಿಕ ನೀತಿ ಸಂಶೋಧಕ ಸಿಂಥಿಯಾ ಸ್ಟೀಫನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT