ಶೋಭಾ ಕರಂದ್ಲಾಜೆ 
ರಾಜ್ಯ

ನೂತನ ಕೃಷಿ ನೀತಿ ಎಪಿಎಂಸಿಗಳನ್ನು ಮುಚ್ಚುವಂತೆ ಮಾಡುವುದಿಲ್ಲ: ಶೋಭಾ ಕರಂದ್ಲಾಜೆ

ಕೃಷಿ ಮಸೂದೆಗಳು ಜಾರಿಯಾದರೆ ಕನಿಷ್ಠ ಬೆಂಬಲ ಬೆಲೆ ಸಿಗುವುದಿಲ್ಲ, ಎಪಿಎಂಸಿಗಳು ಮುಚ್ಚಲಿವೆ ಎಂದು ಪ್ರತಿಪಕ್ಷಗಳು ಆರೋಪಿಸಿ ಪ್ರತಿಭಟನೆ ಮಾಡುತ್ತಿವೆ. ವಾಸ್ತವವಾಗಿ ಎಪಿಎಂಸಿಗಳನ್ನು ಮುಚ್ಚುವುದಿಲ್ಲ, ಕನಿಷ್ಠ ಬೆಂಬಲ ಬೆಲೆಯನ್ನು ರದ್ದು ಮಾಡುವುದಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಉಡುಪಿ: ಕೃಷಿ ಮಸೂದೆಗಳು ಜಾರಿಯಾದರೆ ಕನಿಷ್ಠ ಬೆಂಬಲ ಬೆಲೆ ಸಿಗುವುದಿಲ್ಲ, ಎಪಿಎಂಸಿಗಳು ಮುಚ್ಚಲಿವೆ ಎಂದು ಪ್ರತಿಪಕ್ಷಗಳು ಆರೋಪಿಸಿ ಪ್ರತಿಭಟನೆ ಮಾಡುತ್ತಿವೆ. ವಾಸ್ತವವಾಗಿ ಎಪಿಎಂಸಿಗಳನ್ನು ಮುಚ್ಚುವುದಿಲ್ಲ, ಕನಿಷ್ಠ ಬೆಂಬಲ ಬೆಲೆಯನ್ನು ರದ್ದು ಮಾಡುವುದಿಲ್ಲ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ 3 ಮಸೂದೆಗಳನ್ನು ವಿರೋಧಿಸುತ್ತಿರುವವರು ಅವುಗಳನ್ನು ಅಧ್ಯಯನವೇ ಮಾಡಿಲ್ಲ. ಮಾಡಿದ್ದರೆ ವಿರೋಧಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ. 

ಈ ಮಸೂದೆಗಳನ್ನು ವಿರೋಧಿಸುವವರು ದೇಶದಲ್ಲಿ ಎಪಿಎಂಸಿಗಳು ರದ್ದಾಗುತ್ತಿವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ಮೂರೂ ಮಸೂದೆಗಳಲ್ಲಿ ಎಲ್ಲಿಯೂ ಹಾಗೇ ಹೇಳಿಲ್ಲ. ಬದಲಿಗೆ ರೈತರಿಗೆ ಎಪಿಎಂಸಿಗಳಲ್ಲಿ ಶೋಷಣೆಯಾಗುತ್ತಿದ್ದರೆ ಅವರು ತಮ್ಮ ಉತ್ಪನ್ನಗಳನ್ನು ಬೇರೆಡೆಗೆ ಮಾರಬಹದು ಎಂದಷ್ಟೇ ಹೇಳಿದೆ. 

ದಯವಿಟ್ಟು ವಿರೋಧಿಸುವವರು ಈ ಮಸೂದೆಗಳನ್ನು ಅಧ್ಯಯನ ಮಾಡಿ, 300 ಪುಟಗಳಿವೆ. ಅಷ್ಟನ್ನೂ ಓದುವುದು ಕಷ್ಟ ಅಂತಾದರೇ ಕನಿಷ್ಟ ಅವುಗಳನ್ನು ಸಾರಾಂಶವನ್ನಾದರೂ ತಿಳಿದುಕೊಳ್ಳಿ. ರೈತರನ್ನು ದಾರಿ ತಪ್ಪಿಸಬೇಡಿ ಎಂದು ಶೋಭಾ ಸಲಹೆ ನೀಡಿದ್ದಾರೆ. 

ಯಾವುದೇ ಮಸೂದೆಯ ಸಾಧಕ ಬಾಧಕಗಳನ್ನು ತಿಳಿಯಬೇಕಾದರೆ ಜಾರಿಯಾಗಿ ಕನಿಷ್ಟ ಒಂದು ವರ್ಷವಾದರೂ ಬೇಕಾಗುತ್ತದೆ. ಆನಂತರವೂ ಸಂಸತ್ತು ಸೇರುತ್ತದೆ. ಈ ಕಾಯ್ದೆಗೆ ತಿದ್ದುಪಡಿಗಳೇನಾದರೂ ಬೇಕಾಗಿದ್ದರೆ ಮಾಡಬಹುದು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT