ಸಂಗ್ರಹ ಚಿತ್ರ 
ರಾಜ್ಯ

ಪ್ರತ್ಯೇಕ ಅವಘಡ: ನೀರಿನಿಲ್ಲ ಮುಳುಗಿ ಮೂವರು ಜಲಸಮಾಧಿ

ಕರ್ನಾಟಕದಲ್ಲಿ ನಡೆದ ಎರಡು ಪ್ರತ್ಯೇಕ ಅವಘಡದಲ್ಲಿ ಮೂವರು ನೀರಿನಲ್ಲಿ ಮುಳುಗಿ ಜಲ ಸಮಾಧಿಯಾಗಿದ್ದಾರೆ. 

ಕಲಬುರಗಿ/ರಾಯಚೂರು: ಕರ್ನಾಟಕದಲ್ಲಿ ನಡೆದ ಎರಡು ಪ್ರತ್ಯೇಕ ಅವಘಡದಲ್ಲಿ ಮೂವರು ನೀರಿನಲ್ಲಿ ಮುಳುಗಿ ಜಲ ಸಮಾಧಿಯಾಗಿದ್ದಾರೆ. 

ಕಲಬುರಗಿಯ ಹಳೆ ಶಹಾಬಾದ್ ಪಟ್ಟಣದ ವಿಶ್ವಾರಾಧ್ಯ ದೇವಸ್ಥಾನದ ಬಳಿ ಭಾನುವಾರ ನಡೆದಿದ್ದು ಶಹಾಬಾದ್ ಪಟ್ಟಣದ ವಿಶ್ವನಾಥ ತಂದೆ ರಾಜು (15) ಹಾಗೂ ತೇಜಸ್ವಿ ಪೂರ್ಣಚಂದ್ರ ತಂದೆ ಆನಂದ(14) ಮೃತ ಬಾಲಕರು.

ಮಸ್ಕಿ ಹಳ್ಳದಲ್ಲಿ ಕೊಚ್ಚಿಹೋದ ಓರ್ವ, ಮೂವರು ಪಾರು
ರಾಯಚೂರು: ಜಿಲ್ಲೆಯ ಮಸ್ಕಿ ಡ್ಯಾಂನಿಂದ‌ ಭಾರಿ ಪ್ರಮಾಣದ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಇಬ್ಬರು ಯುವಕರು ನಡುದಿಬ್ಬದಲ್ಲೇ ಸಿಲುಕಿಕೊಂಡಿದ್ದರು. ಆದರೆ, ರಕ್ಷಣಾ ಕಾರ್ಯ ವಿಫಲಗೊಂಡ ಪರಿಣಾಮ ಯುವಕನೋರ್ವ ಕೊಚ್ಚಿಕೊಂಡು ಹೋಗಿದ್ದಾನೆ.

ಮಸ್ಕಿ ಪಟ್ಟಣ ನಿವಾಸಿ ಚನ್ನಬಸವ ಕೊಚ್ಚಿ ಹೋಗಿರುವ ಯುವಕ. ಭಾನುವಾರ ನಸುಕಿನಲ್ಲಿ ಚನ್ನಬಸವ ಮತ್ತು ಜಲೀಲ್‌ ಬಹಿರ್ದೆಸೆಗೆ ತೆರಳಿದ್ದರು‌. ಈ ವೇಳೆ ಏಕಾಏಕೀ  ಹಳ್ಳದ ನೀರು ಹರಿದಾಗ ಕಲ್ಲುಬಂಡೆಗಳ ಮೇಲೆ ಪ್ರತ್ಯೇಕವಾಗಿ ನಿಂತಿದ್ದರು. ನಂತರ ವಿಷಯ ತಿಳಿಯುತ್ತಿದ್ದಂತೆ ಇಬ್ಬರೂ ಯುವಕರನ್ನು ರಕ್ಷಿಸಲು ಅಗ್ನಿಶಾಮಕ ಸಿಬ್ಬಂದಿ ಬೆಳಿಗ್ಗೆ ಕಾರ್ಯಾಚರಣೆಗೆ ಮುಂದಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT