ಸಾಂದರ್ಭಿಕ ಚಿತ್ರ 
ರಾಜ್ಯ

ಸನಾತನ ಧರ್ಮ ರಕ್ಷಣೆ ಉದ್ದೇಶ: ಬ್ರಾಹ್ಮಣ ಪುರೋಹಿತರು ಎಲ್ಲ ಜಾತಿಯವರಿಗೂ ಸಾಂಸ್ಕೃತಿಕ ಸಂಸ್ಕಾರ ನೀಡಲು ನಿರ್ಧಾರ

ಸನಾತನ ಹಿಂದೂ ಧರ್ಮವನ್ನು ಬಲಪಡಿಸುವ ಸಲುವಾಗಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಪುರೋಹಿತರು ಎಲ್ಲಜಾತಿಗೆ ಸೇರಿದವರಿಗೂ ಸಾಂಸ್ಕೃತಿಕ ಸಂಸ್ಕಾರ ನೀಡಲು ನಿರ್ಧರಿಸಿದ್ದಾರೆ.

ಬೆಂಗಳೂರು: ಸನಾತನ ಹಿಂದೂ ಧರ್ಮವನ್ನು ಬಲಪಡಿಸುವ ಸಲುವಾಗಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಪುರೋಹಿತರು ಎಲ್ಲ ಜಾತಿಗೆ ಸೇರಿದವರಿಗೂ ಸಾಂಸ್ಕೃತಿಕ ಸಂಸ್ಕಾರ ನೀಡಲು ನಿರ್ಧರಿಸಿದ್ದಾರೆ.

ಸನಾತನ ಹಿಂದೂ ಧರ್ಮವನ್ನು ಬಲಪಡಿಸುವ ಸಲುವಾಗಿ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಪುರೋಹಿತರು ಎಲ್ಲಜಾತಿಗೆ ಸೇರಿದವರಿಗೂ ಸಾಂಸ್ಕೃತಿಕ ಸಂಸ್ಕಾರವನ್ನು ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ನಗರದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರು ಮತ್ತು ಪುರೋಹಿತರ ಪರಿಷತ್ತಿನ ಪ್ರಥಮ ಸಭೆಯಲ್ಲಿ  ಅವಿರೋಧವಾಗಿ ನಿರ್ಣಯ ಕೈಗೊಳ್ಳಲಾಗಿದೆ. ಅಂಥಹ ಸಾಂಸ್ಕೃತಿಕ ಉಪದೇಶ ಶಿಬಿರಗಳನ್ನು ರಾಜ್ಯದ ಎಲ್ಲ ಹೋಬಳಿ ಮಟ್ಟದಲ್ಲಿ ನಡೆಸಲೂ ತೀರ್ಮಾನಿಸಲಾಗಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರು ಮತ್ತು ಪುರೋಹಿತರ ಪರಿಷತ್ತು ದೇವಾಲಯಗಳಲ್ಲಿ ಪೂಜೆ ನೆರವೇರಿಸುವ ಅರ್ಚಕರ ಮತ್ತು ಮನೆಗಳಿಗೆ ತೆರಳಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿಕೊಡುವ ಪುರೋಹಿತರುಗಳ ಸರ್ವೋನ್ನತ ಸಂಸ್ಥೆಯಾಗಿದೆ. ಈ ವಿಷಯ ಕುರಿತಂತೆ ಮಾತನಾಡಿದ ಅಖಿಲ ಕರ್ನಾಟಕ  ಬ್ರಾಹ್ಮಣ ಅರ್ಚಕರು ಮತ್ತು ಪುರೋಹಿತರ ಪರಿಷತ್ತಿನ ಹಿರಿಯ ಉಪಾಧ್ಯಕ್ಷ ಡಾ. ಬಿ.ಎಸ್. ರಾಘವೇಂದ್ರ ಭಟ್, ಸನಾತನ ಧರ್ಮವನ್ನು ಸಂರಕ್ಷಿಸುವ ಸಲುವಾಗಿ ಎಲ್ಲ ಜಾತಿಯ ಜನರನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮತ್ತು ಅವರ ಬಲವರ್ಧನೆ ಅನಿವಾರ್ಯ ಮತ್ತು  ಅತ್ಯಗತ್ಯವಾಗಿದೆ ಎಂದು ಹೇಳಿದರು.

“ಕೆಲವು ಜಾತಿಯ ಜನರು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಅವರ ಆರ್ಥಿಕ ಸ್ಥಿತಿಯೂ ಒಂದು ಕಾರಣವಾಗಿದೆ. ಇದಕ್ಕೆ ಮತ್ತೊಂದು ಕಾರಣವೇನೆಂದರೆ ಆ ವರ್ಗದ ಸೋದರರನ್ನು ಧಾರ್ಮಿಕ ವಿಧಿಗಳಿಂದ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಂದ ದೂರ ಇಟ್ಟಿರುವುದಾಗಿದೆ. ನಾವು ಈ ಮತಾಂತರದ  ವಿನಾಶಕಾರಿ ಅಭ್ಯಾಸವನ್ನು ನಿಲ್ಲಿಸಬೇಕಾಗಿದೆ ಮತ್ತು ಹೀಗಾಗಿ ಎಲ್ಲ ಜಾತಿಯ ಜನರಿಗೂ ನಾವು ಸಾಂಸ್ಕೃತಿಕ ಸಂಸ್ಕಾರವನ್ನು ನೀಡುವ ಮೂಲಕ ಅವರನ್ನು ಸನಾತನ ಧರ್ಮದ ಒಳಕ್ಕೆ ಅರ್ಥಪೂರ್ಣವಾಗಿ ತರಬೇಕಾಗಿದೆ ”ಎಂದು ಡಾ.ರಾಘವೇಂದ್ರ ಭಟ್ ವಿವರಿಸಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದಲೇ ವಿಮಾ ಕಂತು ಪಾವತಿ
ಉದ್ಘಾಟನಾ ಭಾಷಣದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ, ಎಲ್ಲ ಅರ್ಚಕರಿಗೆ ಮತ್ತು ಪುರೋಹಿತರಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದಲೇ ವಿಮಾ ಕಂತು ಪಾವತಿಸುವ ಮೂಲಕ 5 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವುದಾಗಿ  ಪ್ರಕಟಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT