ರಾಜ್ಯ

ಡಿ.ಜೆ. ಹಳ್ಳಿ ಗಲಭೆ: ವಿಚಾರಣೆಗೆ ಹಾಜರಾಗುವಂತೆ ಕಾರ್ಪೋರೇಟರ್ ಗೆ ಸಿಸಿಬಿ ನೋಟಿಸ್

Manjula VN

ಬೆಂಗಳೂರು: ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಫೇಸ್ಬುಕ್ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಯಲ್ಲಿ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ಪುಲಿಕೇಶಿನಗರ ಕಾರ್ಪೋರೇಟರ್ ಜಾಕೀರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ.

ಇಂದು ಜಾಕೀರ್ ಅವರು ಇಂದು ಬೆಳಗ್ಗೆ 10 ಗಂಟೆ ವೇಳೆಗೆ ಪೊಲೀಸರ ಎದುರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಪೊಲೀಸರು ಈಗಾಗಲೇ ಒಂದು ಬಾರಿ ವಿಚಾರಣೆ ನಡೆಸಿದ್ದಾರೆ. ಅಲ್ಲದೆ, ಈ ವೇಳೆ ಜಾಕೀರ್ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು ಅದನ್ನು ಎಫ್ ಎಸ್ ಎಲ್ ಗೆ ರವಾನಿಸಿದ್ದರು. ಸದ್ಯ ಮೊಬೈಲ್ ನಲ್ಲಿ ಡಿಲೀಟ್ ಆದ ಕೆಲವು ಮೆಸೇಜ್ ಗಳು ರಿಟ್ರೈವ್ ಮಾಡಲಾಗಿದೆ. 

ಈ ಸಂದೇಶದಲ್ಲಿ ಮಹತ್ವದ ಅಂಶಗಳು ಇರುವುದರಿಂದ ಮತ್ತೆ ಜಾಕೀರ್ ಅವರ ವಿಚಾರಣೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

SCROLL FOR NEXT