ರಾಜ್ಯ

ಪದೇ ಪದೇ ಬಿ.ಶ್ರೀರಾಮುಲು ಅವರೇ ಟಾರ್ಗೆಟ್: ಖಾತೆ ಬದಲಾವಣೆಗೆ ಬೆಂಬಲಿಗರ ಆಕ್ರೋಶ

Shilpa D

ಚಿತ್ರದುರ್ಗ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಚಿವ ಸಂಪುಟದ ಸದಸ್ಯರ ಖಾತೆ ಬದಲಾವಣೆ ಮಾಡಿದ ಬೆನ್ನಲ್ಲೇ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರ ಬೆಂಬಲಿಗರು ಆಕ್ರೋಶ ಹೊರ ಹಾಕಿದ್ದಾರೆ.

ಖಾತೆ ಬದಲಾವಣೆ ವಿಷಯ ಜಿಲ್ಲೆಯ ಪ್ರತಿಪಕ್ಷಗಳಿಗೆ ಉತ್ತಮ ಆಹಾರವಾಗಿದೆ, ಜೊತೆಗೆ ಶ್ರೀರಾಮುಲು ಅವರಿಗೆ ಹಿಂಬಡ್ತಿಯಾಗಿದೆ ಎಂದುನ ಬೆಂಬಲಿಗರು ಅಸಮಾಧಾನ ಹೊರ ಹಾಕಿದ್ದಾರೆ.

ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಖಾತೆಯ ಜೊತೆಗೆ ಆರೋಗ್ಯ ಖಾತೆಯನ್ನು ಮರಳಿ ಕೊಡಬೇಕು ಎಂದು ಅವರ ಬೆಂಬಲಿಗರು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ. ಶ್ರೀರಾಮುಲು ಅವರು ಆರೋಗ್ಯ ಇಲಾಖೆಯನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಂಡಿದ್ದರು. 108 ಆ್ಯಂಬುಲೆನ್ಸ್ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವುದು,
ಸಭೆಗಳನ್ನು ನಡೆಸುವ ಮೂಲಕ ಹಲವು ಬದಲಾವಣೆಳನ್ನು ತಂದಿದ್ದರು ಎಂದು ಅವರ ಬೆಂಬಲಿಗರು ಹೇಳಿದ್ದಾರೆ.

ಖಾತೆ ಬದಲಾವಣೆಯಿಂದ ಶ್ರೀರಾಮುಲು ಅವರ ವರ್ಚಸ್ಸಿಗೆ ಧಕ್ಕೆ ಉಂಟಾಗುತ್ತದೆ, ಜೊತೆಗೆ ನಮ್ಮ ನಾಯಕ ಶ್ರೀರಾಮುಲು ಅವರನ್ನು ಪದೇ ಪದೇ ಟಾರ್ಗೆಟ್ ಮಾಡಲಾಗುತ್ತಿದೆ, ಡಿಸಿಎಂ ಹುದ್ದೆ ನೀಡುವುದಾಗಿ ನೀಡಿದ್ದ ಆಶ್ವಾಸನೆಯನ್ನು ಬಿಜೆಪಿ ಹೈಕಮಾಂಡ್ ಇನ್ನೂ ಈಡೇರಿಸಿಲ್ಲ ಎಂದು ಅಖಿಲ ಕರ್ನಾಟಕ ಶ್ರೀರಾಮುಲು ಅಭಿಮಾನಿಗಳ ಸಂಘದ ಅಧ್ಯಕ್ಷ ಬಿ ವಿಜಯ್ ತಿಳಿಸಿದ್ದಾರೆ.

SCROLL FOR NEXT