ಸಾಂದರ್ಭಿಕ ಚಿತ್ರ 
ರಾಜ್ಯ

ರೈತರ ಹೆಸರಿನಲ್ಲಿ ನಕಲಿ ಬಿಲ್: ವಂಚಕ ಜಾಲ ಬೇಧಿಸಿದ ಕೃಷಿ ಇಲಾಖೆ

ರೈತರ ಹೆಸರಿನಲ್ಲಿ ನಕಲಿ ಬಿಲ್ ತಯಾರಿಸಿ ಸೊಸೈಟಿಗಳ ಜೊತೆ ಶಾಮೀಲಾಗಿ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ ಮಾಡುತ್ತಿದ್ದ ದೊಡ್ಡ ಜಾಲವನ್ನು ಬೇದಿಸಲಾಗಿದೆ.

ಬೆಂಗಳೂರು: ರೈತರ ಹೆಸರಿನಲ್ಲಿ ನಕಲಿ ಬಿಲ್ ತಯಾರಿಸಿ ಸೊಸೈಟಿಗಳ ಜೊತೆ ಶಾಮೀಲಾಗಿ ಯೂರಿಯಾ ರಸಗೊಬ್ಬರ ಅಭಾವ ಸೃಷ್ಟಿ ಮಾಡುತ್ತಿದ್ದ ದೊಡ್ಡ ಜಾಲವನ್ನು ಬೇದಿಸಲಾಗಿದೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೊಡಿಗಿನಬೆಲೆ ಗ್ರಾಮದ ಮರ್ಕೂರಿ ಪಾಲಿಮರ್ಸ್ ಸಂಸ್ಥೆ ಪ್ರಾಥಮಿಕ ಸಹಕಾರ ಸಂಘ ವೇಮಗಲ್ ಹೆಸರಿನಲ್ಲಿ ಇ-ವೇ ನಕಲಿ ಬಿಲ್ ತಯಾರಿಸಿ ರೈತರಿಗೆ ಸಬ್ಸಿಡಿ ರೂಪದಲ್ಲಿ ಕೃಷಿ ಇಲಾಖೆ ವಿತರಿಸುತ್ತಿದ್ದ ಯೂರಿಯಾ ರಸಗೊಬ್ಬರವನ್ನು ದುರುಪಯೋಗಪಡಿಸಿಕೊಂಡು, ಕಾಂಟ್ರಾಕ್ಟ್ ದಾರರನ್ನು ಬುಕ್ ಮಾಡಿಕೊಂಡು ನೈಟ್ರೋಜನ್ ಎಕ್ಸ್ಟ್ರಾಕ್ಟ್ ಮಾಡಿ ಕೆಮಿಕಲ್ ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಇದರಿಂದ ರೈತರಿಗೆ ಗೊಬ್ಬರದ ಅಭಾವ ಸೃಷ್ಟಿಯಾಗಿರುವುದು ಕಂಡುಬಂದಿದೆ.

ಹೀಗೆ ಸಬ್ಸಿಡಿ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಮಾರಾಟ ಮಾಡಿ ದುರುಪಯೋಗಪಡಿಸಿಕೊಳ್ಳುತ್ತಿದ್ದ ಮರ್ಕೂರಿ ಪಾಲಿಮರ್ಸ್ ಸಂಸ್ಥೆಯ ಮಾಲೀಕರು ಹಾಗೂ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಕೃಷಿ ಇಲಾಖೆ ದೂರು ದಾಖಲಿಸಿದೆ.

ಇದೆ ಅಕ್ಟೋಬರ್ 14 ರಂದು ಕೋಲಾರ ಜಿಲ್ಲೆಯ ಜಾಗೃತಕೋಶದ ಸಹಾಯಕ ನಿರ್ದೇಶಕ, ಜಾರಿದಳ ಜಂಟಿ ಕೃಷಿ ನಿರ್ದೇಶಕ ಹೆಚ್.ಕೆ.ರಾಮಕೃಷ್ಣ ಅವರಿಗೆ ಬಂದ ಖಚಿತ ದೂರಿನ ಮೇರೆಗೆ ಕೊಡಗಿನಬೆಲೆ ಗ್ರಾಮದ ಮರ್ಕೂರಿ ಪಾಲಿಮರ್ಸ್ ಕಂಪೆನಿಯ ಗೋಡೌನ್ ಮೇಲೆ ದಾಳಿ ಮಾಡಿದಾಗ ಕಂಪೆನಿಗೆ ಸೇರಿದ ಲಾರಿ ಚಾಲಕ ಕೃಷಿ ಇಲಾಖೆಗೆ ಸೇರಿದ ಸುಮಾರು 440 ಯೂರಿಯಾ ಮೂಟೆಗಳನ್ನು ತನ್ನ ಮಾಲೀಕ ಕೃಷ್ಣಪ್ರಸಾದ್ ರೆಡ್ಡಿಯ ಸೂಚನೆ ಮೇರೆಗೆ ವೇಮಗಲ್ಗೆ ತೆಗೆದುಕೊಂಡು ಹೋಗದೇ ಮರ್ಕೂರಿ ಪಾಲಿಮರ್ ಗೋಡೌನ್ ಬಳಿ ಇಳಿಸಿ ದಾಸ್ತಾನು ಮಾಡಿದ್ದು ಪತ್ತೆಯಾಗಿರುತ್ತದೆ.

ಅಲ್ಲದೇ ಈ ಯೂರಿಯಾ ಮೂಟೆಗಳು ಪ್ರಾಥಮಿಕ ಸಹಕಾರ ಸಂಘ ವೇಮಗಲ್ ಹೆಸರಿನಲ್ಲಿ ಇ-ವೇ ನಕಲಿ ಬಿಲ್ ತಯಾರಿಸಿದ್ದು ಕಂಡು ಬಂದಿರುತ್ತದೆ. ಸ್ಥಳದಲ್ಲಿ ವಿಚಕ್ಷಣಾ ದಳ ಸುಮಾರು 1,17,260 ರೂ.ಮೌಲ್ಯದ ಯೂರಿಯಾ ಮೂಟೆಗಳನ್ನು ವಶಪಡಿಸಿಕೊಂಡಿದೆ.

ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಕಂಪೆನಿ ವಿರುದ್ಧ ದೂರು ದಾಖಲಾಗಿದೆ. ಇದರ ಹಿಂದೆ ದೊಡ್ಡ ಜಾಲವೇ ಇದ್ದು, ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT