ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆ: 48 ಕಾಳಜಿ ಕೇಂದ್ರ ಸ್ಥಾಪನೆ- ಜಿಲ್ಲಾಧಿಕಾರಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನಿರಾಶ್ರಿತಗೊಂಡ ಜನರಿಗೆ ಜಿಲ್ಲೆಯಾದ್ಯಂತ 48 ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಕಲಬುರಗಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನಿರಾಶ್ರಿತಗೊಂಡ ಜನರಿಗೆ ಜಿಲ್ಲೆಯಾದ್ಯಂತ 48 ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಕಲಬುರಗಿ, ಕಮಲಾಪೂರ ಹಾಗೂ ಅಫಜಲಪುರ ತಾಲೂಕಿನಲ್ಲಿ ತಲಾ 3, ಆಳಂದ ತಾಲೂಕಿನಲ್ಲಿ 4, ಜೇವರ್ಗಿ ತಾಲೂಕಿನಲ್ಲಿ 1, ಚಿತ್ತಾಪುರ ಮತ್ತು ಸೇಡಂ ತಾಲೂಕಿನಲ್ಲಿ ತಲಾ 5, ಶಹಾಬಾದ ತಾಲೂಕಿನಲ್ಲಿ 4, ಕಾಳಗಿ ತಾಲೂಕಿನಲ್ಲಿ 8 ಹಾಗೂ ಚಿಂಚೋಳಿ ತಾಲೂಕಿನಲ್ಲಿ 12 ಸೇರಿದಂತೆ ಒಟ್ಟಾರೆ 48 ಕಾಳಜಿ ಕೇಂದ್ರ ತೆರೆದು 7603 ಜನರಿಗೆ ಆಶ್ರಯ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬುಧವಾರ ರಾತ್ರಿ 8 ಗಂಟೆ ವರೆಗಿನ ಅಂದಾಜಿನ ಪ್ರಕಾರ ಜಿಲ್ಲೆಯ 4819 ಮನೆಗಳಿಗೆ ಪ್ರವಾಹದ ನೀರು ನುಗ್ಗಿ ಬಟ್ಟೆ-ಪಾತ್ರೆಗಳು ಹಾನಿಗೊಳಗಾಗಿವೆ. 1058 ಮನೆಗಳಿಗೂ ಭೀಕರ ಮಳೆ ಹಾನಿ ಮಾಡಿದೆ. ಇದಲ್ಲದೆ 518 ಜಾನುವಾರಗಳ ಜೀವ ಹಾನಿ ಬಗ್ಗೆಯೂ ವರದಿಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭೀಮಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಭೀಮಾ ನದಿಗೆ ಬಿಟ್ಟಿರುವುದರಿಂದ ಸೊನ್ನ ಬ್ಯಾರೇಜಿಗೆ 1 ಲಕ್ಷದ 98 ಸಾವಿರ  ಕ್ಯುಸೆಕ್ ನೀರು ಒಳ ಹರಿವಾಗಿ ಬರುತ್ತಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಸೊನ್ನ ಬ್ಯಾರೇಜಿನಿಂದ ಭೀಮಾ ನದಿಗೆ 2 ಲಕ್ಷದ  23 ಸಾವಿರ ಕ್ಯುಸೆಕ್ ನೀರು ಹರಿಬಿಡಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಲಬುರಗಿ ವೃತ್ತದ ಅಧೀಕ್ಷಕ ಅಭಿಯಂತ ಜಗನ್ನಾಥ ಹಲಿಂಗೆ ತಿಳಿಸಿದ್ದಾರೆ.

ಬ್ಯಾರೇಜಿನ ಕೆಳ ಪಾತ್ರದಲ್ಲಿ ಬರುವ ಅಫಜಲಪೂರ, ಚಿತ್ತಾಪುರ, ಜೇವರ್ಗಿ ಹಾಗೂ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನದಿ ಪಾತ್ರದ ಜನರು ನದಿ ದಂಡೆಗೆ ಹೋಗಬಾರದು ಮತ್ತು ತಮ್ಮ ಜಾನುವಾರಗಳೊಂದಿಗೆ ಸುರಕ್ಷತಾ ಕ್ರಮದೊಂದಿಗೆ ಎಚ್ಚರಿಕೆಯಿಂದಿರುವಂತೆ ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT