ಸಾಂದರ್ಭಿಕ ಚಿತ್ರ 
ರಾಜ್ಯ

ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಕ್ಕನನ್ನು ಪ್ರೀತಿಸಿದ ಕಾರಣಕ್ಕೆ ತಮ್ಮನಿಂದ ಪ್ರಿಯಕರನ ಹತ್ಯೆ

ಇದೇ ತಿಂಗಳ 5ರಂದು ಹೊನ್ನಘಟ್ಟ ಕೆರೆಯ ಅಂಗಳದ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಯುವಕನ ಶವ ಪ್ರಕರಣವನ್ನು ಭೇದಿಸಿರುವ ದೊಡ್ಡಬೆಳವಂಗಲ ಪೊಲೀಸರು, ಯುವಕನನ್ನು ಕೊಲೆ ಮಾಡಿದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು: ಇದೇ ತಿಂಗಳ 5ರಂದು ಹೊನ್ನಘಟ್ಟ ಕೆರೆಯ ಅಂಗಳದ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಯುವಕನ ಶವ ಪ್ರಕರಣವನ್ನು ಭೇದಿಸಿರುವ ದೊಡ್ಡಬೆಳವಂಗಲ ಪೊಲೀಸರು, ಯುವಕನನ್ನು ಕೊಲೆ ಮಾಡಿದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೊಲೆಯಾದ ಯುವಕನನ್ನು ಪಿ.ಚೇತನ್(20) ಎಂದು ಗುರುತಿಸಲಾಗಿದೆ. ಪ್ರಜ್ವಲ್, ಮಿಥುನ್, ಗಣೇಶ, ನಂದನ್, ಪವನ್ ಎಂಬವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಘಟನೆಯ ಹಿನ್ನೆಲೆ
ಕೊಲೆಯಾದ ಚೇತನ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿಯ ತಮ್ಮ ಆರೋಪಿಗಳಲ್ಲಿ ಒಬ್ಬನಾದ ಪ್ರಜ್ವಲ್ ಗೆ ಇದು ಇಷ್ಟವಿರಲಿಲ್ಲ. ಮಾತ್ರವಲ್ಲ ಚೇತನ್ ನನ್ನು ಹೊಡೆದು ಸರಿಯಾದ ಪಾಠ ಕಲಿಸಬೇಕು ಎಂದು ಪ್ರಜ್ವಲ್ ಆಗಾಗ್ಗ ಸ್ನೇಹಿತರ ಬಳಿ ಹೇಳಿಕೊಂಡಿದ್ದ. ಈ ಮಧ್ಯೆ ಒಂದು ದಿನ ಚೇತನ್ ಮತ್ತು ಪ್ರಜ್ವಲ್ನ ಅಕ್ಕ ಮನೆ ಬಿಟ್ಟು ಪರಾರಿಯಾಗಿದ್ದರು.
ಇದರಿಂದ ಆಕ್ರೋಶಗೊಂಡ ಪ್ರಜ್ವಲ್ ಸಂಚು ರೂಪಿಸಿ ಸ್ನೇಹಿತ ನಿಖಿಲ್ ಮೂಲಕ ಇಬ್ಬರನ್ನು ವಾಪಸ್ ಕರೆತಂದಿದ್ದನು.

ಹುಟ್ಟುಹಬ್ಬಕ್ಕೆ ಕ್ಯಾಮೆರಾ ಕೊಡಿಸುವುದಾಗಿ ನಂಬಿಸಿ ಚೇತನ್ ನನ್ನು ಸ್ನೇಹಿತನ ಮೂಲಕ ಸಂಚು ರೂಪಿಸಿ ಕರೆಸಿಕೊಂಡ ಆರೋಪಿಗಳು, ಬಳಿಕ ಅಪಹರಿಸಿ ದೊಡ್ಡಬಳ್ಳಾಪುರದ ಹೊನ್ನಾಘಟ್ಟದ ಕೆರೆಯಲ್ಲಿ ಕೊಲೆಗೈದಿದ್ದರು. ನಂತರ ಹೊನ್ನಘಟ್ಟ ಕೆರೆಯ ಅಂಗಳದ ಪೊದೆಯಲ್ಲಿ ಶವವನ್ನು ಎಸೆದಿದ್ದರು.

ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಕೊಂಡ ದೊಡ್ಡಬೆಳವಂಗಲ ಪೊಲೀಸರು ಶವದ ಪತ್ತೆಗಾಗಿ ತನಿಖೆ ಆರಂಭಿಸಿದಾಗ ನಗರದ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ಅ.2ರಂದು ಯುವಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಳೆತ ಶವವನ್ನು ನಾಪತ್ತೆಯಾದ ಯುವಕನ‌ ಕುಟುಂಬದವರನ್ನು ವಿಚಾರಿಸಿದಾಗ ಅದು ಪಿ.ಚೇತನ್(20)ಎಂದು ಪತ್ತೆಯಾಗಿದೆ. ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT