ಭದ್ರ ಜಲಾಶಯ 
ರಾಜ್ಯ

ಧಾರಾಕಾರ ಮಳೆ ಹಿನ್ನೆಲೆ: ಭದ್ರಾ ಜಲಾಶಯದ ಗೇಟ್ ಮತ್ತೆ ಓಪನ್

ಭದ್ರಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾದ ನಂತರ, ಅಧಿಕಾರಿಗಳು ಎಲ್ಲಾ ನಾಲ್ಕು ಕ್ರೆಸ್ಟ್ ಗೇಟ್‌ಗಳನ್ನು ತೆರೆಯುವ ಮೂಲಕ 8,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆ.

ಶಿವಮೊಗ್ಗ: ಭದ್ರಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾದ ನಂತರ, ಅಧಿಕಾರಿಗಳು ಎಲ್ಲಾ ನಾಲ್ಕು ಕ್ರೆಸ್ಟ್ ಗೇಟ್‌ಗಳನ್ನು ತೆರೆಯುವ ಮೂಲಕ 8,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಿದ್ದಾರೆ.

ಈ ಋತುವಿನಲ್ಲಿ ಎರಡನೇ ಬಾರಿ ಬಲವಂತವಾಗಿ ಗೇಟ್ ಗಳನ್ನು ತೆರೆಯಲಾಗಿದೆ. ಬುಧವಾರ ಬೆಳಗ್ಗೆ ಭದ್ರಾ ಜಲಾಶಯದಲ್ಲಿ 185.11 ಟಿಎಂಸಿ ಅಡಿ ನೀರು ತುಂಬಿತ್ತು, ಜಲಾಶಯದ ಗರಿಷ್ಠ ಮಟ್ಟ 186 ಟಿಎಂಸಿಯಾಗಿದೆ. ಜಲಾಶಯದ ಒಳಹರಿವು 14,304 ಕ್ಯೂಸೆಕ್ ಮತ್ತು ಹೊರಹರಿವು 8,251 ಕ್ಯೂಸೆಕ್ ಆಗಿತ್ತು.

ಸುಮಾರು 8,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲು ಪ್ರಾರಂಭಿಸಿದ್ದೇವೆ ಮತ್ತು ನೀರಿನ ಒಳಹರಿವನ್ನು ಪರಿಗಣಿಸಿ, ನಾವು 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಬಹುದು ಎಂದು ಜಲಾಶಯದ ಕಾರ್ಯಕಾರಿ ಎಂಜಿನೀಯರ್ ಮಂಜುನಾಥ್ ಹೇಳಿದ್ದಾರೆ. 

ಬುಧವಾರ ಲಿಂಗನಮಕ್ಕಿ ಜಲಾಶಯದಲ್ಲಿನ ನೀರಿನ ಮಟ್ಟವು 1,819 ಟಿಎಂಸಿಎಫ್‌ನ ಗರಿಷ್ಠ ನೀರಿನ ಮಟ್ಟಕ್ಕಿಂತ 1,814 ಟಿಎಂಸಿ ಅಡಿಗಳಷ್ಟಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT