ಟಿ.ಎಸ್. ನಾಗಾಭರಣ 
ರಾಜ್ಯ

ಸಿಬಿಸಿಎಸ್ ಪದ್ಧತಿಯಿಂದ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ: ಟಿ. ಎಸ್. ನಾಗಾಭರಣ

ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರಲ್ಲಿ ಮನವಿ ಮಾಡಿದ್ದಾರೆ.

ಯುಜಿಸಿ ಜಾರಿಗೆ ತರಲಾಗಿರುವ ಸಿಬಿಸಿಎಸ್ ಪದ್ಧತಿಯ ಅನುಷ್ಠಾನದಲ್ಲಾದ ಗೊಂದಲಗಳ ಬಗ್ಗೆ ಈಗಾಗಲೇ 2-3 ಬಾರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಂಬಂಧಪಟ್ಟ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆಯಲಾಗಿದೆ. ಆದಾಗ್ಯೂ,ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಸಿಬಿಸಿಎಸ್ ಪದ್ಧತಿಯ ಮಾರ್ಗಸೂಚಿ ಮಾದರಿಗಳನ್ನೇ ಕಾನೂನು ಎಂಬ ರೀತಿಯಲ್ಲಿ ಭಾವಿಸಿಕೊಂಡು ಇಂಗ್ಲಿಷ್ ಭಾಷೆಯನ್ನು ಕಡ್ಡಾಯಗೊಳಿಸಿ ಕನ್ನಡ ಭಾಷಾ ವಿಷಯದ ಬೋಧನಾ ಕಾರ್ಯಭಾರವನ್ನು ಕಡಿತಗೊಳಿಸಿರುವುದರಿಂದ ಕನ್ನಡ ಪ್ರಾಧ್ಯಾಪಕರು ತೊಂದರೆಗೆ ಸಿಲುಕುವಂತಾಗಿದೆ ಎಂದು ಉಪಮುಖ್ಯಮಂತ್ರಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 ಕೃಪಾಂಕಗಳನ್ನು ನೀಡುವಾಗಲೂ ಸಹ ಕನ್ನಡ ಭಾಷೆಗೆ ಕಡಿಮೆ ಕೃಪಾಂಕಗಳನ್ನು ನೀಡುವ ಮೂಲಕ ಭಾಷಾ ವಿಷಯದಲ್ಲಿ ತಾರತಮ್ಯವನ್ನು ಎಸಗಿವೆ. ಇದರಿಂದಾಗಿ ಕನ್ನಡದ ನೆಲದಲ್ಲಿಯೇ ಕನ್ನಡಕ್ಕೆ ಅನಾಥಪ್ರಜ್ಞೆ ಕಾಡುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia Conflict: ಮಧ್ಯಪ್ರಾಚ್ಯ ಉದ್ವಿಗ್ನತೆ ಕಡಿಮೆ ಮಾಡಲು 'ವಿಶ್ವಾಸಾರ್ಹ' ಭಾರತದಿಂದ ಸಾಧ್ಯ; ಇರಾನ್ ರಾಯಭಾರಿ

ತಮಿಳುನಾಡು ಚುನಾವಣೆಯಿಂದ ಕಮಲ ಹಾಸನ್ ಪಕ್ಷ MNM ಹೊರಕ್ಕೆ: ಕಾರಣ DMK!

West Asia Conflict: ಅಮೆರಿಕದ 15 ಅಂಶಗಳ ಕದನ ವಿರಾಮ ಪ್ರಸ್ತಾವನೆಯನ್ನು ಇರಾನ್‌ ಸ್ವೀಕರಿಸಿದೆ: ಪಾಕಿಸ್ತಾನ

ಇರಾನ್‌ನಲ್ಲಿ ಸಿಲುಕಿದ್ದಾರೆ ಕನ್ಯಾಕುಮಾರಿಯ 1,000ಕ್ಕೂ ಹೆಚ್ಚು ಮೀನುಗಾರರು; ತೀವ್ರ ಆಹಾರ ಕೊರತೆ

"ಕೋವಿಡ್ ನಂತಹ ಪರಿಸ್ಥಿತಿ": ಪ್ರಧಾನಿ ಮೋದಿಯ ಹೇಳಿಕೆ ಜನರನ್ನು ಭಯಭೀತಗೊಳಿಸಿದೆ'

SCROLL FOR NEXT