ಟಿ.ಎಸ್. ನಾಗಾಭರಣ 
ರಾಜ್ಯ

ಸಿಬಿಸಿಎಸ್ ಪದ್ಧತಿಯಿಂದ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ: ಟಿ. ಎಸ್. ನಾಗಾಭರಣ

ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರಲ್ಲಿ ಮನವಿ ಮಾಡಿದ್ದಾರೆ.

ಯುಜಿಸಿ ಜಾರಿಗೆ ತರಲಾಗಿರುವ ಸಿಬಿಸಿಎಸ್ ಪದ್ಧತಿಯ ಅನುಷ್ಠಾನದಲ್ಲಾದ ಗೊಂದಲಗಳ ಬಗ್ಗೆ ಈಗಾಗಲೇ 2-3 ಬಾರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಂಬಂಧಪಟ್ಟ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆಯಲಾಗಿದೆ. ಆದಾಗ್ಯೂ,ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಸಿಬಿಸಿಎಸ್ ಪದ್ಧತಿಯ ಮಾರ್ಗಸೂಚಿ ಮಾದರಿಗಳನ್ನೇ ಕಾನೂನು ಎಂಬ ರೀತಿಯಲ್ಲಿ ಭಾವಿಸಿಕೊಂಡು ಇಂಗ್ಲಿಷ್ ಭಾಷೆಯನ್ನು ಕಡ್ಡಾಯಗೊಳಿಸಿ ಕನ್ನಡ ಭಾಷಾ ವಿಷಯದ ಬೋಧನಾ ಕಾರ್ಯಭಾರವನ್ನು ಕಡಿತಗೊಳಿಸಿರುವುದರಿಂದ ಕನ್ನಡ ಪ್ರಾಧ್ಯಾಪಕರು ತೊಂದರೆಗೆ ಸಿಲುಕುವಂತಾಗಿದೆ ಎಂದು ಉಪಮುಖ್ಯಮಂತ್ರಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 ಕೃಪಾಂಕಗಳನ್ನು ನೀಡುವಾಗಲೂ ಸಹ ಕನ್ನಡ ಭಾಷೆಗೆ ಕಡಿಮೆ ಕೃಪಾಂಕಗಳನ್ನು ನೀಡುವ ಮೂಲಕ ಭಾಷಾ ವಿಷಯದಲ್ಲಿ ತಾರತಮ್ಯವನ್ನು ಎಸಗಿವೆ. ಇದರಿಂದಾಗಿ ಕನ್ನಡದ ನೆಲದಲ್ಲಿಯೇ ಕನ್ನಡಕ್ಕೆ ಅನಾಥಪ್ರಜ್ಞೆ ಕಾಡುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!