ಟಿ.ಎಸ್. ನಾಗಾಭರಣ 
ರಾಜ್ಯ

ಸಿಬಿಸಿಎಸ್ ಪದ್ಧತಿಯಿಂದ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕ: ಟಿ. ಎಸ್. ನಾಗಾಭರಣ

ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ಸಿಬಿಸಿಎಸ್ ಪದ್ಧತಿಯಿಂದಾಗಿ ಕನ್ನಡ ಭಾಷಾ ಬೋಧನೆಯ ಕಾರ್ಯಭಾರ ಕಡಿಮೆಯಾಗಿರುವ ಪರಿಣಾಮ ಕನ್ನಡ ಪ್ರಾಧ್ಯಾಪಕರ ಉದ್ಯೋಗಕ್ಕೆ ಮಾರಕವಾಗಿದ್ದು, ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಅವರಲ್ಲಿ ಮನವಿ ಮಾಡಿದ್ದಾರೆ.

ಯುಜಿಸಿ ಜಾರಿಗೆ ತರಲಾಗಿರುವ ಸಿಬಿಸಿಎಸ್ ಪದ್ಧತಿಯ ಅನುಷ್ಠಾನದಲ್ಲಾದ ಗೊಂದಲಗಳ ಬಗ್ಗೆ ಈಗಾಗಲೇ 2-3 ಬಾರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸಂಬಂಧಪಟ್ಟ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಪತ್ರ ಬರೆಯಲಾಗಿದೆ. ಆದಾಗ್ಯೂ,ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳು ಸಿಬಿಸಿಎಸ್ ಪದ್ಧತಿಯ ಮಾರ್ಗಸೂಚಿ ಮಾದರಿಗಳನ್ನೇ ಕಾನೂನು ಎಂಬ ರೀತಿಯಲ್ಲಿ ಭಾವಿಸಿಕೊಂಡು ಇಂಗ್ಲಿಷ್ ಭಾಷೆಯನ್ನು ಕಡ್ಡಾಯಗೊಳಿಸಿ ಕನ್ನಡ ಭಾಷಾ ವಿಷಯದ ಬೋಧನಾ ಕಾರ್ಯಭಾರವನ್ನು ಕಡಿತಗೊಳಿಸಿರುವುದರಿಂದ ಕನ್ನಡ ಪ್ರಾಧ್ಯಾಪಕರು ತೊಂದರೆಗೆ ಸಿಲುಕುವಂತಾಗಿದೆ ಎಂದು ಉಪಮುಖ್ಯಮಂತ್ರಿಗಳಿಗೆ ಬರೆಯಲಾಗಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 ಕೃಪಾಂಕಗಳನ್ನು ನೀಡುವಾಗಲೂ ಸಹ ಕನ್ನಡ ಭಾಷೆಗೆ ಕಡಿಮೆ ಕೃಪಾಂಕಗಳನ್ನು ನೀಡುವ ಮೂಲಕ ಭಾಷಾ ವಿಷಯದಲ್ಲಿ ತಾರತಮ್ಯವನ್ನು ಎಸಗಿವೆ. ಇದರಿಂದಾಗಿ ಕನ್ನಡದ ನೆಲದಲ್ಲಿಯೇ ಕನ್ನಡಕ್ಕೆ ಅನಾಥಪ್ರಜ್ಞೆ ಕಾಡುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT