ಆರ್.ಅಶೋಕ್ 
ರಾಜ್ಯ

ರಾಜ್ಯದಲ್ಲಿ ಮಳೆ, ಪ್ರವಾಹ ಹಾನಿ: ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಕೇಂದ್ರಕ್ಕೆ ಆಗ್ರಹ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದಿಂದ ನೀಡುವ ಪರಿಹಾರ ಮೊತ್ತ 5 ಪಟ್ಟು ಹೆಚ್ಚಳಕ್ಕೆ ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಕಲಬುರಗಿ : ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದಿಂದ ನೀಡುವ ಪರಿಹಾರ ಮೊತ್ತ 5 ಪಟ್ಟು ಹೆಚ್ಚಳಕ್ಕೆ ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸ್ಥಿತಿ ಎದುರಿಸಲು ಪ್ರವಾಹ ಪೀಡಿತ ಜಿಲ್ಲಾಡಾಳಿತಕ್ಕೆ 5 ಕೋಟಿ ರೂಪಾಯಿ ನೀಡಲಾಗುವುದು ಎಂದರು.

ರಾಜ್ಯದಲ್ಲಿ ಪ್ರವಾಹದಿಂದ 3,31,170 ಹೆಕ್ಟರ್ ಬೆಳೆ, 23,996 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, 1268 ಸೇತುವೆ ಕುಸಿದಿದ್ದು 173 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕು ಎಂದು ಘೋಷಿಸಲಾಗಿದೆ.

ರಾಜ್ಯದ ಮಳೆ ಹಾನಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವಂತೆ ಕೇಂದ್ರವನ್ನು ಒತ್ತಾಯ ಮಾಡಲಾಗುವುದು ಎಂದು ಹೇಳಿದರು.

ಮಳೆಯಿಂದ ಈವರೆಗೆ 10 ಸಾವಿರಕ್ಕೂ ಹೆಚ್ಚು ಮನೆಗಳು ಕುಸಿದುಬಿದ್ದಿವೆ . 360 ಕೆರೆಗಳು ಒಡೆದು ಹಾನಿಯಾಗಿದೆ. ಜೊತೆಗೆ 3,168 ಸರ್ಕಾರಿ ಕಟ್ಟಡಗಳಿಗೆ ಹಾನಿಯಾಗಿದೆ ಎಲ್ಲಾ ಡಿಸಿಗಳ ಖಾತೆಯಲ್ಲಿ ಹಣವಿದ್ದು ಪರಿಹಾರಕ್ಕೆ ತೊಂದರೆಯಿಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!