ವಿಜಯಪುರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಸಿದ್ಧಗೊಳ್ಳುತ್ತಿರುವ ಎನ್'ಡಿಆರ್'ಎಫ್ ಪಡೆ 
ರಾಜ್ಯ

ರಾಜ್ಯದಲ್ಲಿ ಮತ್ತೆ ತಲೆದೋರಿದ ಪ್ರವಾಹ ಭೀತಿ: ನೆರವಿಗೆ ಧಾವಿಸಿದ ಸೇನಾಪಡೆ, ಆತಂಕದಲ್ಲಿದ್ದ ಸಾವಿರಾರು ಜನರ ಸ್ಥಳಾಂತರ!

ಭೀಮಾ ನದಿ ಪ್ರವಾಹದಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಸೂರ್ಯ ನಗರಿ ಕಲಬುರಗಿಯ ಜನತೆಯ ಸಂರಕ್ಷಣೆಗೆ ಸೇನಾ ಪಡೆ ಬಂದಿಳಿದಿದೆ. ಪ್ರವಾಹದಿಂದ ನಲುಗಿಹೋಗಿರುವ ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಜೊತೆಗೆ ನೆರೆಯ ರಾಯಚೂರಿಗೂ ಇದೀಗ ಮಹಾಪ್ರವಾಹ ವ್ಯಾಪಿಸಿದ್ದು, ಈ ನಾಲ್ಕು ಜಿಲ್ಲೆಗಳ್ಲಲಿ ಮತ್ತೆ ಕಟ್ಟೆಚ್ಚರ ಘೋಷಿಸಲಾಗಿದೆ. 

ಬೆಂಗಳೂರು: ಭೀಮಾ ನದಿ ಪ್ರವಾಹದಿಂದಾಗಿ ತೀವ್ರ ಸಂಕಷ್ಟದಲ್ಲಿರುವ ಸೂರ್ಯ ನಗರಿ ಕಲಬುರಗಿಯ ಜನತೆಯ ಸಂರಕ್ಷಣೆಗೆ ಸೇನಾ ಪಡೆ ಬಂದಿಳಿದಿದೆ. ಪ್ರವಾಹದಿಂದ ನಲುಗಿಹೋಗಿರುವ ಕಲಬುರಗಿ, ಯಾದಗಿರಿ, ವಿಜಯಪುರ ಜಿಲ್ಲೆಗಳ ಜೊತೆಗೆ ನೆರೆಯ ರಾಯಚೂರಿಗೂ ಇದೀಗ ಮಹಾಪ್ರವಾಹ ವ್ಯಾಪಿಸಿದ್ದು, ಈ ನಾಲ್ಕು ಜಿಲ್ಲೆಗಳ್ಲಲಿ ಮತ್ತೆ ಕಟ್ಟೆಚ್ಚರ ಘೋಷಿಸಲಾಗಿದೆ. 

ನದಿ ತೀರದ ಗ್ರಾಮಗಳ ಜನರ ಸ್ಥಳಾಂತರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದ್ದು. ಎನ್'ಡಿಆರ್'ಎಫ್, ಎಸ್'ಡಿಆರ್'ಎಫ್, ಅಗ್ನಿಶಾಮಕದಳದ ಜೊತೆಗೆ ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಶನಿವಾರ ಕಲಬುರಗಿಗೆ ಅರೇಸನಾಪಡೆಯ ತಂಡವೊಂದನ್ನು ರವಾನಿಸಲಾಗಿದೆ. 

ಸಿಕಿಂದ್ರಾಬಾದ್ ನಿಂದ ಬಂದಿಳಿದ ಸೇನಾ ತುಕಡಿಯನ್ನು ಅಪರ ಜಿಲ್ಲಾಧಿಕಾರಿ ಡಾ.ಶಂಕರ್ ವಣಿಕ್ಯಾಳ ಜಿಲ್ಲಾಡಳಿತ ಪರವಾಗಿ ಬರಮಾಡಿಕೊಂಡರು.

ರಾತ್ರಿಯಿಂದಲೇ ಸೇನಾ ಪಡೆ ರಕ್ಷಣಾ‌ ಕಾರ್ಯವನ್ನು ನಡೆಸಿದ್ದು. ಮೇಜರ್ ಮಾರ್ಟಿನ್ ಅರವಿಂದ ಅವರ ನೇತೃತ್ಬದ ಕಂಪನಿಯಲ್ಲಿ ಒಟ್ಟು 98 ಜನ ಯೋಧರು ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಜನಿ, ವೀರ ಭಟ್ಕಕರ್ ಜಲಾಶಯಗಳಿಂದ ಭೀಮಾ ನದಿಗೆ 8 ಲಕ್ಷ ಕ್ಯುಸೆಕ್ ನೀರು ಹರಿದುಬರುತ್ತಿದೆ. ಅದೇ ರೀತಿ ಕೃಷ್ಣಾನದಿಗೆ 2 ಲಕ್ಷ ನೀರು ಬಿಡಲಾಗುತ್ತಿದೆ. ಭೀಮೆ ಪ್ರವಾಹಕ್ಕೆ ಈಗಾಗಲೇ ಕಲಬುರಗಿಯಲ್ಲಿ 157 ಗ್ರಾಮಗಳು ಜಲಾವೃತವಾಗಿದೆ. 

ವಿಜಯಪುರದಲ್ಲಿ 17 ಹಾಗೂ ಯಾದಗಿರಿಯಲ್ಲೂ 10ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಈ ಮೂರೂ ಜಿಲ್ಲೆಗಳಲ್ಲಿ ಭೀಮೆತೀರದ 30 ಸಾವಿರಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ರವಾನಿಸಲಾಗಿದ್ದು, 152 ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಉಕ್ಕಿಹರಿಯುತ್ತಿರುವ ಕೃಷ್ಣಾನಿದಿಯಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಕೆಳಮಟ್ಟದ ಹಲವು ಸೇತುವೆಗಳು ಜವಾವೃತವಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ನಡುಗಡ್ಡೆಯಲ್ಲಿರುವ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗುತ್ತಿದೆ. 

ಭೀಮೆ ಅಬ್ಬರಕ್ಕೆ ಕಲಬುರಗಿ-ಜೇವರ್ಗಿ ನಡುವಿನ ಕಟ್ಟಿ ಸಂಗಾವಿ ಸೇತುವೆ ಮುಳುಗಿದ್ದು, ಈ ರಸ್ತೆಯಲ್ಲಿ ಮೂರು ದಿನಗಳಿಂದ ಲಾರಿಗಳು ಸಾಲುಗಟ್ಟಿ ನಿಂತಿವೆ. ರಕ್ಷಣಾ ಕಾರ್ಯಕ್ಕಾಗಿ ಎನ್'ಡಿಆರ್ಎಫ್, ಎಸ್'ಡಿಆರ್'ಎಫ್'ನ 5 ತಂಡಗಳ ಜೊತೆಗೆ ಈಗ 98 ಮಂದಿಯ ಅರೆಸೇನಾ ಸಿಬ್ಬಂದಿನಯನ್ನೂ ಕರೆಸಿಕೊಳ್ಳಲಾಗಿದೆ. ಇದರ ಜೊತೆಗೆ ಅಗ್ನಿಶಾಮಕ ದಳ, ಗೃಹ ರಕ್ಷಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಯಾದಗಿರಿಯ ಭೀಮಾ ಪಾತ್ರದ 12 ಗ್ರಾಮಗಳು ಭಾರೀ ಪ್ರವಾಹಕ್ಕೆ ತುತ್ತಾಗುವ ಆತಂಕವಿದೆ. ಈಗಾಗಲೇ ಕೆಲವೆಡೆ ನೀರು ನುಗ್ಗಿದ್ದು, 33 ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಳ್ಳುವ ನಿರೀಕ್ಷೆಗಳಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT