ರಾಜ್ಯ

ಬೆಂಗಳೂರು: ಸಿಕ್ಕ ಸಿಕ್ಕವರಿಗೆ ಚಾಕು ಇರಿತ, ಓರ್ವ ಸಾವು,ನಾಲ್ವರು ಗಂಭೀರ

Raghavendra Adiga

ಬೆಂಗಳೂರು: ವ್ಯಕ್ತಿಯೋರ್ವ ದಾರಿಯಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿದಿದ್ದು, ಓರ್ವ ಮೃತಪಟ್ಟಿರುವ ಘಟನೆ ಬಿನ್ನಿಮಿಲ್ ಸಮೀಪದ ಬಾಳೆ ಮಂಡಿಯಲ್ಲಿ ವರದಿಯಾಗಿದೆ.

ಘಟನೆಯಲ್ಲಿ ಮಾರಿ (35) ಎಂಬುವವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಕಾಟನ್ ಪೇಟೆ ಬಳಿಯ ಬಿನ್ನಿಮಿಲ್ ಸಮೀಪ ವ್ಯಕ್ತಿಯೊಬ್ಬ ರಸ್ತೆಯಲ್ಲಿಯೇ ಸಿಕ್ಕ ಸಿಕ್ಕವರಿಗೆ ಚಾಕುವಿನಿಂದ ಇರಿದಿದ್ದಾನೆ, ಇದುವರೆಗೆ 6 ಮಂದಿಗೆ ಚಾಕುವಿನಿಂದ ಚುಚ್ಚಿರುವುದಾಗಿ ತಿಳಿದು ಬಂದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಕಾಟನ್ ಪೇಟೆ ಪೊಲೀಸರು ಆರೋಪಿ ಗಣೇಶ್ ನನ್ನು ವಶಕ್ಕೆ ಪಡೆದಿದ್ದು ತನಿಖೆ ಕೈಗೊಂಡಿದ್ದಾರೆ.

SCROLL FOR NEXT